ನವದೆಹಲಿ: ದಾಖಲೆ ಕೊಡಿ ದಾಖಲೆ ಕೊಡಿ ಎಂದು ಹೇಳುತ್ತೀರಾ! ಇಲ್ನೋಡಿ ನಿಮ್ಮ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಎಂದು ಹೇಳುವ ಮೂಲಕ 60% ಕಮಿಷನ್ ಆರೋಪವನ್ನು ತೀವ್ರಗೊಳಿಸಿರುವ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಟ್ಯಾಗ್ ಮಾಡಿ ಸರ್ಕಾರದ ವಿರುದ್ಧ ಪರ್ಸೆಂಟೇಜ್ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮ ಸರ್ಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ನಡೆಸಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿಬೇಕಾ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.
ಗುತ್ತಿಗೆದಾರರಿಗೆ 32,000 ಕೋಟಿಯಷ್ಟು ಬಿಲ್ ಬಾಕಿ ಇದೆ. ಸಾಲ ಮಾಡಿ ಗುತ್ತಿಗೆದಾರರು ಕಾಮಗಾರಿ ನಡೆಸಿದರೆ, ಅವರ ಮೇಲೂ ನಿಮ್ಮ ಪರ್ಸೆಂಟೇಜ್ ಕರಿನೆರಳು ಬಿದ್ದಿದೆ. ನಿಮಗೆ ಪರ್ಸೆಂಟೇಜ್ ನೀಡಲೂ ಆಗದೇ ಗುತ್ತಿಗೆದಾರರು ದಯಾಮರಣ ಅರ್ಜಿ ಬರೆಯುತ್ತಿದ್ದಾರೆ ಎಂದು ಎಚ್ಡಿಕೆ ಕಳವಳ ವ್ಯಕ್ತಪಡಿಸಿದ್ದಾರೆ.
ಜಲ ಸಂಪನ್ಮೂಲ: 14,600 ಕೋಟಿ, ಲೋಕೋಪಯೋಗಿ 10,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ 3100 ಕೋಟಿ, ಸಣ್ಣ ನೀರಾವರಿ 2800 ಕೋಟಿ, ಇತರೆ ಇಲಾಖೆ 1500 ಕೋಟಿ ಸೇರಿ ಒಟ್ಟು 32,000 ಕೋಟಿ ರೂಪಾಯಿ ಬಾಕಿ ಇದೆ ಎಂದು ಸಚಿವರು ಗಂಭೀರ ಆರೋಪ ಮಾಡಿದ್ದಾರೆ.
ಭಂಡತನ ಬಿಟ್ಟು ತಪ್ಪನ್ನು ಒಪ್ಪಿಕೊಂಡು ಗುತ್ತಿಗೆದಾರರ ಬದುಕು ಉಳಿಸಿ ರಾಜ್ಯದ ಅಭಿವೃದ್ಧಿಯ ಕಡೆ ಗಮನ ಹರಿಸಿ. ನನ್ನ ಮೇಲೆ ನಿಮ್ಮ ಸಂಪುಟ ವಾಗ್ಯುದ್ಧಕ್ಕಿಳಿದರೆ ಪ್ರಯೋಜನವಿಲ್ಲ ಎಂದು ಕಿವಿಮಾತು ಹೇಳಿದ್ದಾರೆ.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…