ದೇಶ- ವಿದೇಶ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ನವದೆಹಲಿ: ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಂದು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದರು.

ಭೇಟಿ ವೇಳೆ ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.

ಪ್ರಧಾನಿ ಮೋದಿ ಅವರ ಆತ್ಮನಿರ್ಭರ್‌ ಭಾರತ್‌, ಮೇಕ್‌ ಇನ್‌ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವಿಕಸಿತ ಭಾರತ ಗುರಿಯನ್ನು ಮುಟ್ಟಲು ಕೈಗೊಳ್ಳಲಾಗಿರುವ ಸರ್ವ ಕ್ರಮಗಳ ಬಗ್ಗೆಯೂ ಎಚ್‌ಡಿಕೆ ಮಾಹಿತಿ ನೀಡಿದರು.

ಬೃಹತ್‌ ಕೈಗಾರಿಕೆ ವಲಯದಲ್ಲಿ ತರಲಾಗಿರುವ ಸುಧಾರಣಾ ಕ್ರಮಗಳು ಹಾಗೂ ಪಿಎಂ ಇ ಡ್ರೈವ್‌ ಬಗ್ಗೆಯೂ ವಿವರಣೆ ಕೊಟ್ಟರು.

ದೇಶದಲ್ಲಿ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್‌ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಯ ಪುನಶ್ಚೇತನಕ್ಕೆ 11,400 ಕೋಟಿ ರೂಗಳ ಪ್ಯಾಕೇಜ್‌ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

6 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

6 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

9 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

9 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

9 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

10 hours ago