ಗೋವಾ: ಕಾಂಗ್ರೆಸ್ ಮಾಡಿದ ತಪ್ಪುಗಳನ್ನೇ ನಾವು ಮುಂದುವರಿಸಿದರೆ ನಮ್ಮ ಆಡಳಿತದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ.
ಗೋವಾ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ ಅವರು, ಬಿಜೆಪಿ ಆಡಳಿತದಲ್ಲಿ ಭಿನ್ನತೆ ಹೊಂದಿರುವ ಪಕ್ಷವಾಗಿದೆ. ಅದಕ್ಕಾಗಿಯೇ ಪಕ್ಷವು ಮತದಾರರ ವಿಶ್ವಾಸವನ್ನು ಪದೇ ಪದೇ ಗೆದ್ದಿದೆ. ನಾವು ಕಾಂಗ್ರೆಸ್ ತಪ್ಪುಗಳನ್ನೇ ಮುಂದುವರಿಸಿದರೆ, ಅವರ ನಿರ್ಗಮನ ಮತ್ತು ನಮ್ಮ ಪ್ರವೇಶದಿಂದ ಯಾವುದೇ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ.
ನಮ್ಮದು ಭಿನ್ನತೆ ಹೊಂದಿರುವ ಪಕ್ಷ ಎಂದು ಅಡ್ವಾಣಿ ಹೇಳುತ್ತಿದ್ದರು. ಇತರ ಪಕ್ಷಗಳಿಂದ ಎಷ್ಟು ಭಿನ್ನವಾಗಿದ್ದೇವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಒತ್ತಿ ಹೇಳಿದ್ದಾರೆ.
ಕಾಂಗ್ರೆಸ್ನ ತಪ್ಪುಗಳಿಂದಾಗಿ ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ. ಅದೇ ತಪ್ಪುಗಳನ್ನು ನಮ್ಮ ಪಕ್ಷದವರು ಮಾಡಬಾರದು. ಅದಕ್ಕಾಗಿಯೇ ಮುಂದಿನ ದಿನಗಳಲ್ಲಿ ರಾಜಕೀಯವು ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ತರುವ ಸಾಧನವಾಗಿದೆ ಎಂಬುದನ್ನು ಪಕ್ಷದ ಕಾರ್ಯಕರ್ತರು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ನಾವು ಭ್ರಷ್ಟಾಚಾರ ಮುಕ್ತ ದೇಶವನ್ನು ರಚಿಸಬೇಕಾಗಿದೆ. ಅದಕ್ಕಾಗಿ ನಾವು ಯೋಜನೆಯನ್ನು ಹೊಂದಿರಬೇಕು. ನಾನು ಜಾತಿ ರಾಜಕಾರಣದಲ್ಲಿ ತೊಡಗುವುದಿಲ್ಲ ಎಂದು ಜನರಿಗೆ ಹೇಳಿದ್ದೇನೆ. ನಾನು ಈ ಪ್ರವೃತಿಯನ್ನು ಅನುಸರಿಸದಿರಲು ನಿರ್ಧರಿಸಿದ್ದೇನೆ ಎಂದು ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.
ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…
ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…