ಗೋವಾ: ಕಾಂಗ್ರೆಸ್ ಮಾಡಿದ ತಪ್ಪುಗಳನ್ನೇ ನಾವು ಮುಂದುವರಿಸಿದರೆ ನಮ್ಮ ಆಡಳಿತದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ.
ಗೋವಾ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ ಅವರು, ಬಿಜೆಪಿ ಆಡಳಿತದಲ್ಲಿ ಭಿನ್ನತೆ ಹೊಂದಿರುವ ಪಕ್ಷವಾಗಿದೆ. ಅದಕ್ಕಾಗಿಯೇ ಪಕ್ಷವು ಮತದಾರರ ವಿಶ್ವಾಸವನ್ನು ಪದೇ ಪದೇ ಗೆದ್ದಿದೆ. ನಾವು ಕಾಂಗ್ರೆಸ್ ತಪ್ಪುಗಳನ್ನೇ ಮುಂದುವರಿಸಿದರೆ, ಅವರ ನಿರ್ಗಮನ ಮತ್ತು ನಮ್ಮ ಪ್ರವೇಶದಿಂದ ಯಾವುದೇ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ.
ನಮ್ಮದು ಭಿನ್ನತೆ ಹೊಂದಿರುವ ಪಕ್ಷ ಎಂದು ಅಡ್ವಾಣಿ ಹೇಳುತ್ತಿದ್ದರು. ಇತರ ಪಕ್ಷಗಳಿಂದ ಎಷ್ಟು ಭಿನ್ನವಾಗಿದ್ದೇವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಒತ್ತಿ ಹೇಳಿದ್ದಾರೆ.
ಕಾಂಗ್ರೆಸ್ನ ತಪ್ಪುಗಳಿಂದಾಗಿ ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ. ಅದೇ ತಪ್ಪುಗಳನ್ನು ನಮ್ಮ ಪಕ್ಷದವರು ಮಾಡಬಾರದು. ಅದಕ್ಕಾಗಿಯೇ ಮುಂದಿನ ದಿನಗಳಲ್ಲಿ ರಾಜಕೀಯವು ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ತರುವ ಸಾಧನವಾಗಿದೆ ಎಂಬುದನ್ನು ಪಕ್ಷದ ಕಾರ್ಯಕರ್ತರು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ನಾವು ಭ್ರಷ್ಟಾಚಾರ ಮುಕ್ತ ದೇಶವನ್ನು ರಚಿಸಬೇಕಾಗಿದೆ. ಅದಕ್ಕಾಗಿ ನಾವು ಯೋಜನೆಯನ್ನು ಹೊಂದಿರಬೇಕು. ನಾನು ಜಾತಿ ರಾಜಕಾರಣದಲ್ಲಿ ತೊಡಗುವುದಿಲ್ಲ ಎಂದು ಜನರಿಗೆ ಹೇಳಿದ್ದೇನೆ. ನಾನು ಈ ಪ್ರವೃತಿಯನ್ನು ಅನುಸರಿಸದಿರಲು ನಿರ್ಧರಿಸಿದ್ದೇನೆ ಎಂದು ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…