ಗೋವಾ: ಕಾಂಗ್ರೆಸ್ ಮಾಡಿದ ತಪ್ಪುಗಳನ್ನೇ ನಾವು ಮುಂದುವರಿಸಿದರೆ ನಮ್ಮ ಆಡಳಿತದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ.
ಗೋವಾ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ ಅವರು, ಬಿಜೆಪಿ ಆಡಳಿತದಲ್ಲಿ ಭಿನ್ನತೆ ಹೊಂದಿರುವ ಪಕ್ಷವಾಗಿದೆ. ಅದಕ್ಕಾಗಿಯೇ ಪಕ್ಷವು ಮತದಾರರ ವಿಶ್ವಾಸವನ್ನು ಪದೇ ಪದೇ ಗೆದ್ದಿದೆ. ನಾವು ಕಾಂಗ್ರೆಸ್ ತಪ್ಪುಗಳನ್ನೇ ಮುಂದುವರಿಸಿದರೆ, ಅವರ ನಿರ್ಗಮನ ಮತ್ತು ನಮ್ಮ ಪ್ರವೇಶದಿಂದ ಯಾವುದೇ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ.
ನಮ್ಮದು ಭಿನ್ನತೆ ಹೊಂದಿರುವ ಪಕ್ಷ ಎಂದು ಅಡ್ವಾಣಿ ಹೇಳುತ್ತಿದ್ದರು. ಇತರ ಪಕ್ಷಗಳಿಂದ ಎಷ್ಟು ಭಿನ್ನವಾಗಿದ್ದೇವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಒತ್ತಿ ಹೇಳಿದ್ದಾರೆ.
ಕಾಂಗ್ರೆಸ್ನ ತಪ್ಪುಗಳಿಂದಾಗಿ ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ. ಅದೇ ತಪ್ಪುಗಳನ್ನು ನಮ್ಮ ಪಕ್ಷದವರು ಮಾಡಬಾರದು. ಅದಕ್ಕಾಗಿಯೇ ಮುಂದಿನ ದಿನಗಳಲ್ಲಿ ರಾಜಕೀಯವು ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ತರುವ ಸಾಧನವಾಗಿದೆ ಎಂಬುದನ್ನು ಪಕ್ಷದ ಕಾರ್ಯಕರ್ತರು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ನಾವು ಭ್ರಷ್ಟಾಚಾರ ಮುಕ್ತ ದೇಶವನ್ನು ರಚಿಸಬೇಕಾಗಿದೆ. ಅದಕ್ಕಾಗಿ ನಾವು ಯೋಜನೆಯನ್ನು ಹೊಂದಿರಬೇಕು. ನಾನು ಜಾತಿ ರಾಜಕಾರಣದಲ್ಲಿ ತೊಡಗುವುದಿಲ್ಲ ಎಂದು ಜನರಿಗೆ ಹೇಳಿದ್ದೇನೆ. ನಾನು ಈ ಪ್ರವೃತಿಯನ್ನು ಅನುಸರಿಸದಿರಲು ನಿರ್ಧರಿಸಿದ್ದೇನೆ ಎಂದು ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…
ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …
ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…
ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…
ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…
ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…