ಗೋವಾ: ಕಾಂಗ್ರೆಸ್ ಮಾಡಿದ ತಪ್ಪುಗಳನ್ನೇ ನಾವು ಮುಂದುವರಿಸಿದರೆ ನಮ್ಮ ಆಡಳಿತದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ.
ಗೋವಾ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ ಅವರು, ಬಿಜೆಪಿ ಆಡಳಿತದಲ್ಲಿ ಭಿನ್ನತೆ ಹೊಂದಿರುವ ಪಕ್ಷವಾಗಿದೆ. ಅದಕ್ಕಾಗಿಯೇ ಪಕ್ಷವು ಮತದಾರರ ವಿಶ್ವಾಸವನ್ನು ಪದೇ ಪದೇ ಗೆದ್ದಿದೆ. ನಾವು ಕಾಂಗ್ರೆಸ್ ತಪ್ಪುಗಳನ್ನೇ ಮುಂದುವರಿಸಿದರೆ, ಅವರ ನಿರ್ಗಮನ ಮತ್ತು ನಮ್ಮ ಪ್ರವೇಶದಿಂದ ಯಾವುದೇ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ.
ನಮ್ಮದು ಭಿನ್ನತೆ ಹೊಂದಿರುವ ಪಕ್ಷ ಎಂದು ಅಡ್ವಾಣಿ ಹೇಳುತ್ತಿದ್ದರು. ಇತರ ಪಕ್ಷಗಳಿಂದ ಎಷ್ಟು ಭಿನ್ನವಾಗಿದ್ದೇವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಒತ್ತಿ ಹೇಳಿದ್ದಾರೆ.
ಕಾಂಗ್ರೆಸ್ನ ತಪ್ಪುಗಳಿಂದಾಗಿ ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ. ಅದೇ ತಪ್ಪುಗಳನ್ನು ನಮ್ಮ ಪಕ್ಷದವರು ಮಾಡಬಾರದು. ಅದಕ್ಕಾಗಿಯೇ ಮುಂದಿನ ದಿನಗಳಲ್ಲಿ ರಾಜಕೀಯವು ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ತರುವ ಸಾಧನವಾಗಿದೆ ಎಂಬುದನ್ನು ಪಕ್ಷದ ಕಾರ್ಯಕರ್ತರು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ನಾವು ಭ್ರಷ್ಟಾಚಾರ ಮುಕ್ತ ದೇಶವನ್ನು ರಚಿಸಬೇಕಾಗಿದೆ. ಅದಕ್ಕಾಗಿ ನಾವು ಯೋಜನೆಯನ್ನು ಹೊಂದಿರಬೇಕು. ನಾನು ಜಾತಿ ರಾಜಕಾರಣದಲ್ಲಿ ತೊಡಗುವುದಿಲ್ಲ ಎಂದು ಜನರಿಗೆ ಹೇಳಿದ್ದೇನೆ. ನಾನು ಈ ಪ್ರವೃತಿಯನ್ನು ಅನುಸರಿಸದಿರಲು ನಿರ್ಧರಿಸಿದ್ದೇನೆ ಎಂದು ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…