ದೇಶ- ವಿದೇಶ

ಏಮ್ಸ್‌ ಸ್ಥಾಪನೆ ಬಗ್ಗೆ ಕೇಂದ್ರ ಮಲತಾಯಿ ಧೋರಣೆ: ಡಿಕೆ ಶಿವಕುಮಾರ್‌

ನವದೆಹಲಿ: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ ಸೇರಿದಂತೆ ರಾಜ್ಯದ ಎಲ್ಲಾ ವಿಚಾರಗಳಲ್ಲೂ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ರಾಜ್ಯದ ಸಂಸದರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ ವಿಚಾರವಾಗಿ ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಲಾಗಿದೆ. ನಾನು ಸಚಿವನಾಗಿದ್ದಾಗಲೂ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಸಹಕಾರ ನೀಡದೆ ನಿರ್ಲಕ್ಷಿಸುತ್ತಿದೆ ಎಂದರು.

ಈ ಬಾರಿಯ ಬಜೆಟ್‌ನಲ್ಲಿ ಏಮ್ಸ್‌ ಬಗ್ಗೆ ಪ್ರಸ್ತಾಪ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ, ರಾಜ್ಯಕ್ಕೆ ಏಮ್ಸ್‌ ನೀಡಲೇಬಾರದು ಎಂದು ಕೇಂದ್ರ ಸರ್ಕಾರ ನಿರ್ಧಾರ ಮಾಡಿದಂತಿದೆ. ಇದರ ವಿರುದ್ಧ ರಾಜ್ಯದ ಸಂಸತ್‌ ಸದಸ್ಯರು ಹೋರಾಟಕ್ಕೆ ಮುಂದಾಗಿದ್ದಾರೆ ಎಂದರು.

ಜಿ.ಕುಮಾರ ನಾಯಕ ಮಾತನಾಡಿ, ಏಮ್ಸ್‌ಗಾಗಿ ಜಿಲೆಯಲ್ಲಿ ಸಾವಿರಾರು ದಿನಗಳಿಂದ ಹೋರಾಟ ನಡೆಯುತ್ತಿದೆ. ಈ ವಿಚಾರವಾಗಿ ಮುಖ್ಯಮಂತ್ರಿಯವರು ಕೂಡ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದರೆ, ಏನು ಪ್ರಯೋಜನವಾಗಿಲ್ಲ. ಕೇಂದ್ರಕ್ಕೆ ಮತ್ತೊಮ್ಮೆ ಮನವರಿಕೆ ಮಾಡಿಕೊಡಲು ನಿಯೋಗ ಕಲುಹಿಸಲಾಗುವುದು ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್‌ ಮಾತನಾಡಿ‌, ಏಮ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಪಕ್ಷಾತೀತವಾಗಿ ಹೋರಾಟ ಮಾಡಲು ಬಿಜೆಪಿ ಸಂಸದರಿಗೂ ಆಹ್ವಾನ ನೀಡಿದ್ದೆವು. ಆದರೆ, ಅವರು ಬರಲಿಲ್ಲ. ಈ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

10 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

18 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

22 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

28 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

32 mins ago