ದೇಶ- ವಿದೇಶ

ಏಮ್ಸ್‌ ಸ್ಥಾಪನೆ ಬಗ್ಗೆ ಕೇಂದ್ರ ಮಲತಾಯಿ ಧೋರಣೆ: ಡಿಕೆ ಶಿವಕುಮಾರ್‌

ನವದೆಹಲಿ: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ ಸೇರಿದಂತೆ ರಾಜ್ಯದ ಎಲ್ಲಾ ವಿಚಾರಗಳಲ್ಲೂ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ರಾಜ್ಯದ ಸಂಸದರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ ವಿಚಾರವಾಗಿ ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಲಾಗಿದೆ. ನಾನು ಸಚಿವನಾಗಿದ್ದಾಗಲೂ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಸಹಕಾರ ನೀಡದೆ ನಿರ್ಲಕ್ಷಿಸುತ್ತಿದೆ ಎಂದರು.

ಈ ಬಾರಿಯ ಬಜೆಟ್‌ನಲ್ಲಿ ಏಮ್ಸ್‌ ಬಗ್ಗೆ ಪ್ರಸ್ತಾಪ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ, ರಾಜ್ಯಕ್ಕೆ ಏಮ್ಸ್‌ ನೀಡಲೇಬಾರದು ಎಂದು ಕೇಂದ್ರ ಸರ್ಕಾರ ನಿರ್ಧಾರ ಮಾಡಿದಂತಿದೆ. ಇದರ ವಿರುದ್ಧ ರಾಜ್ಯದ ಸಂಸತ್‌ ಸದಸ್ಯರು ಹೋರಾಟಕ್ಕೆ ಮುಂದಾಗಿದ್ದಾರೆ ಎಂದರು.

ಜಿ.ಕುಮಾರ ನಾಯಕ ಮಾತನಾಡಿ, ಏಮ್ಸ್‌ಗಾಗಿ ಜಿಲೆಯಲ್ಲಿ ಸಾವಿರಾರು ದಿನಗಳಿಂದ ಹೋರಾಟ ನಡೆಯುತ್ತಿದೆ. ಈ ವಿಚಾರವಾಗಿ ಮುಖ್ಯಮಂತ್ರಿಯವರು ಕೂಡ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದರೆ, ಏನು ಪ್ರಯೋಜನವಾಗಿಲ್ಲ. ಕೇಂದ್ರಕ್ಕೆ ಮತ್ತೊಮ್ಮೆ ಮನವರಿಕೆ ಮಾಡಿಕೊಡಲು ನಿಯೋಗ ಕಲುಹಿಸಲಾಗುವುದು ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್‌ ಮಾತನಾಡಿ‌, ಏಮ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಪಕ್ಷಾತೀತವಾಗಿ ಹೋರಾಟ ಮಾಡಲು ಬಿಜೆಪಿ ಸಂಸದರಿಗೂ ಆಹ್ವಾನ ನೀಡಿದ್ದೆವು. ಆದರೆ, ಅವರು ಬರಲಿಲ್ಲ. ಈ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

6 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

8 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

10 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

10 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

11 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

11 hours ago