ದೇಶ- ವಿದೇಶ

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದನ್ನು  ಭಾರತೀಯ ಲೆಕ್ಕಪರಿಶೋಧಕ ಮತ್ತು ಮಹಾಲೇಖಪಾಲರ (CAG) ವರದಿ ಬಹಿರಂಗಪಡಿಸಿದೆ.

ಸಂಸತ್ತಿನಲ್ಲಿ ಮಂಡಿಸಲಾದ 2024-25ರ ಕೇಂದ್ರ ಸರ್ಕಾರದ ಲೆಕ್ಕಪತ್ರ ವರದಿಯನ್ನು ವಿಶ್ಲೇಷಿಸಿರುವ ಸಿಎಜಿ, ಕೇಂದ್ರ ಸರ್ಕಾರವು ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಅನುದಾನವನ್ನು ತಡೆಹಿಡಿಯುತ್ತಿರುವ ಶೈಲಿಯನ್ನು ಸಂಪೂರ್ಣವಾಗಿ ಬಯಲಿಗೆಳೆದಿದೆ.

ಸ್ವರೂಪದ ಪ್ರಕೃತಿ ವಿಕೋಪಗಳ ಪರಿಹಾರಕ್ಕಾಗಿ ಎನ್‌ಡಿಆರ್‌ಎಫ್ ಅಡಿಯಲ್ಲಿ ಒಟ್ಟು ರೂ.11,474 ಕೋಟಿ ಮಂಜೂರಾಗಿತ್ತು. ಆದರೆ, ರಾಜ್ಯಗಳಿಗೆ ತಲುಪಿದ್ದು ಕೇವಲ ರೂ.5,356 ಕೋಟಿ ಮಾತ್ರ. ಅಂದರೆ, ಶೇ. 53 ಕ್ಕಿಂತಲೂ ಹೆಚ್ಚು ಅನುದಾನ (ರೂ6,117.97 ಕೋಟಿ) ಬಳಕೆಯಾಗದೆ ಕೇಂದ್ರದ ಬೊಕ್ಕಸದಲ್ಲೇ ಉಳಿದುಕೊಂಡಿದೆ.

ರಾಷ್ಟ್ರೀಯ ವಿಪತ್ತು ಶಮನ ನಿಧಿ (NDMF) ಅಡಿಯಲ್ಲಿ ಮಂಜೂರಾಗಿದ್ದ ರೂ.2,868 ಕೋಟಿಗಳ ಪೈಕಿ ರಾಜ್ಯಗಳಿಗೆ ವರ್ಗಾವಣೆಯಾಗಿದ್ದು ಕೇವಲ ರೂ.719.72 ಕೋಟಿ ಮಾತ್ರ. ಶೇ. 75 ರಷ್ಟು ಅನುದಾನ ಬಳಕೆಯಾಗದೆ ಬಾಕಿ ಉಳಿದಿದೆ.

ರಾಜ್ಯಗಳಿಗೆ ನೀಡಲಾಗುವ ‘ವಿಶೇಷ ನೆರವು’ ಯೋಜನೆಗೆ ರೂ20,000 ಕೋಟಿ ನಿಗದಿಪಡಿಸಲಾಗಿದ್ದರೂ, ವೆಚ್ಚ ಮಾಡಿದ್ದು ಕೇವಲ ರೂ.3,350 ಕೋಟಿ. ಉಳಿದ ಶೇ. 83 ರಷ್ಟು ಹಣ ಬಿಡುಗಡೆಯೇ ಆಗಿಲ್ಲ.ಪ್ರಕೃತಿ ವಿಕೋಪ ಪರಿಹಾರಕ್ಕಾಗಿ ‘ಮುಂಗಡ ನೆರವಿನ ಸಾಲ’ವಾಗಿ ನೀಡಲು ಕಾಯ್ದಿರಿಸಲಾಗಿದ್ದ ರೂ.100 ಕೋಟಿ ಅನುದಾನದಿಂದ ಒಂದು ಪೈಸೆಯನ್ನೂ ಬಳಸಲಾಗಿಲ್ಲ.

2024ರಲ್ಲಿ ಭೀಕರ ಬರಗಾಲ ಎದುರಿಸಿದ್ದ ಕರ್ನಾಟಕ ಸರ್ಕಾರವು ರೂ.18,000 ಕೋಟಿ ಪರಿಹಾರ ಕೋರಿತ್ತು. ಆದರೆ, ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಕೇವಲ ರೂ.3,499 ಕೋಟಿ ಮಾತ್ರ. ಈ ತಾರತಮ್ಯವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಾಯಿತು.

ಆಂದೋಲನ ಡೆಸ್ಕ್

Recent Posts

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago