ನವದೆಹಲಿ: ಜಾರ್ಖಂಡ್ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಎನ್ಡಿಎ ಮೈತ್ರಿಕೂಟಕ್ಕೆ ಸೇರಿದ್ದಾರೆ ಎಂದು ಬಿಹಾರದ ಮಾಜಿ ಸಿಎಂ ಚಿತನ್ ರಾಂ ಮಾಂಝಿ ಹೇಳಿದ್ದಾರೆ.
ಇದರಿಂದ ಜಾರ್ಖಾಂಡ್ ಮುಕ್ತಿ ಮೋರ್ಚಾ ಪಕ್ಷ ಮತ್ತು ಜಾರ್ಕಾಂಡ್ ಸಿಎಂ ಹೇಮಂತ್ ಸೊರೆನ್ ಅವರಿಗೆ ಅವರಿಗೆ ಬಹುದೊಡ್ಡ ಹಿನ್ನಡೆಯಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.
ಜಿತನ್ ರಾಂ ಮಾಂಝಿ ಅವರ ಹಿಂದೂಸ್ಥಾನಿ ಅವಾಮ್ ಮಾಂಝಿ ಕೂಡ ಬಿಜೆಪಿ ನೇತೃತ್ವದ ಎನ್ಡಿಎ ಭಾಗವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮಾಂಝಿ, ಬಿಹಾರದಿಂದ ಬೇರ್ಪಟ್ಟು ಜಾರ್ಖಂಡ್ ರಾಜ್ಯ ರಚಿಸುವಲ್ಲಿ ಚಂಪೈ ಸೂರೆನ್ ಪಾತ್ರ ಮುಖ್ಯ ಹೀಗಾಗಿ ಅವರನ್ನು ಟೈಗರ್ ಎನ್ನಲಾಗುತ್ತದೆ. ಅವರು ಹುಲಿಯಾಗಿದ್ದರು ಮತ್ತು ಹುಲಿಯಾಗಿಯೇ ಉಳಿಯುತ್ತಾರೆ ಎಂದಿದ್ದಾರೆ.
ಚಂಪೈ ಸೂರೆನ್ ಟ್ವೀಟ್
ನಾವು ರಕ್ತ ಮತ್ತು ಬೆವರು ಸುರಿಸಿ ಕಟ್ಟಿದ ಪಕ್ಷದಲ್ಲಿ ನನ್ನ ಅವಮಾನವಾಗಿದೆ. ಜಾರ್ಖಾಂಡ್ನ ಮುಖ್ಯಮಂತ್ರಿಯಾಗಿ ಕೂಡ ನಾನು ಸಾಕಷ್ಟು ಅವಮಾನ ಎದುರಿಸಿದೆ ಎಂದು ಹೇಳಿದ್ದಾರೆ. ದೆಹಲಿಗೆ ತಲುಪಿದ ಬೆನ್ನಲ್ಲೇ ಅವರ ಹೇಳಿಕೆ ಹೀಗೆ ಹೊರಬಿದ್ದಿದೆ. ನಾನು ಸಿಎಂ ಆಗಿದ್ದ ಅವಧಿಯಲ್ಲಿ ಜಾರಿಗೊಳಿಸಿದ್ದ ಎಲ್ಲ ಯೋಜನೆಗಳನ್ನು ಪಕ್ಷದ ಹೈಕಮಾಂಡ್ ರದ್ದುಗೊಳಿಸಿದೆ ಎಂದು ದೂರಿದ ಸೂರೆನ್, ಸಿಎಂ ಅವರೊಬ್ಬರು ಜಾರಿಗೊಳಿಸಿದ ಯೋಜನೆಗಳನ್ನು ಮತ್ತೊಬ್ಬರು ರದ್ದುಗೊಳಿಸುವುದಕ್ಕಿಂತ ಹೆಚ್ಚು ಅವಮಾನ ಪ್ರಜಾಪ್ರಭುತ್ವದಲ್ಲಿ ಬೇರೇನಿದೆ ಎಂದು ಪ್ರಶ್ನಿಸಿದ್ದಾರೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…