ದೇಶ- ವಿದೇಶ

ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಚಂಪೈ ಸೂರೆನ್‌..?

ನವದೆಹಲಿ: ಜಾರ್ಖಂಡ್‌ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ್ದಾರೆ ಎಂದು ಬಿಹಾರದ ಮಾಜಿ ಸಿಎಂ ಚಿತನ್‌ ರಾಂ ಮಾಂಝಿ ಹೇಳಿದ್ದಾರೆ.

ಇದರಿಂದ ಜಾರ್ಖಾಂಡ್‌ ಮುಕ್ತಿ ಮೋರ್ಚಾ ಪಕ್ಷ ಮತ್ತು ಜಾರ್ಕಾಂಡ್‌ ಸಿಎಂ ಹೇಮಂತ್‌ ಸೊರೆನ್‌ ಅವರಿಗೆ ಅವರಿಗೆ ಬಹುದೊಡ್ಡ ಹಿನ್ನಡೆಯಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.

ಜಿತನ್‌ ರಾಂ ಮಾಂಝಿ ಅವರ ಹಿಂದೂಸ್ಥಾನಿ ಅವಾಮ್‌ ಮಾಂಝಿ ಕೂಡ ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಮಾಂಝಿ, ಬಿಹಾರದಿಂದ ಬೇರ್ಪಟ್ಟು ಜಾರ್ಖಂಡ್‌ ರಾಜ್ಯ ರಚಿಸುವಲ್ಲಿ ಚಂಪೈ ಸೂರೆನ್‌ ಪಾತ್ರ ಮುಖ್ಯ ಹೀಗಾಗಿ ಅವರನ್ನು ಟೈಗರ್‌ ಎನ್ನಲಾಗುತ್ತದೆ. ಅವರು ಹುಲಿಯಾಗಿದ್ದರು ಮತ್ತು ಹುಲಿಯಾಗಿಯೇ ಉಳಿಯುತ್ತಾರೆ ಎಂದಿದ್ದಾರೆ.

ಚಂಪೈ ಸೂರೆನ್‌ ಟ್ವೀಟ್‌
ನಾವು ರಕ್ತ ಮತ್ತು ಬೆವರು ಸುರಿಸಿ ಕಟ್ಟಿದ ಪಕ್ಷದಲ್ಲಿ ನನ್ನ ಅವಮಾನವಾಗಿದೆ. ಜಾರ್ಖಾಂಡ್‌ನ ಮುಖ್ಯಮಂತ್ರಿಯಾಗಿ ಕೂಡ ನಾನು ಸಾಕಷ್ಟು ಅವಮಾನ ಎದುರಿಸಿದೆ ಎಂದು ಹೇಳಿದ್ದಾರೆ. ದೆಹಲಿಗೆ ತಲುಪಿದ ಬೆನ್ನಲ್ಲೇ ಅವರ ಹೇಳಿಕೆ ಹೀಗೆ ಹೊರಬಿದ್ದಿದೆ. ನಾನು ಸಿಎಂ ಆಗಿದ್ದ ಅವಧಿಯಲ್ಲಿ ಜಾರಿಗೊಳಿಸಿದ್ದ ಎಲ್ಲ ಯೋಜನೆಗಳನ್ನು ಪಕ್ಷದ ಹೈಕಮಾಂಡ್‌ ರದ್ದುಗೊಳಿಸಿದೆ ಎಂದು ದೂರಿದ ಸೂರೆನ್‌, ಸಿಎಂ ಅವರೊಬ್ಬರು ಜಾರಿಗೊಳಿಸಿದ ಯೋಜನೆಗಳನ್ನು ಮತ್ತೊಬ್ಬರು ರದ್ದುಗೊಳಿಸುವುದಕ್ಕಿಂತ ಹೆಚ್ಚು ಅವಮಾನ ಪ್ರಜಾಪ್ರಭುತ್ವದಲ್ಲಿ ಬೇರೇನಿದೆ ಎಂದು ಪ್ರಶ್ನಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

4 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

4 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

5 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

6 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

7 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

7 hours ago