ದೇಶ- ವಿದೇಶ

ಆಂಧ್ರಪ್ರದೇಶ: ಭರ್ಜರಿ ಬಹುಮತ ಪಡೆದ ಟಿಡಿಪಿ ನೇತೃತ್ವದ ಮೈತ್ರಿಗೆ ಜಯ

ನವದೆಹಲಿ: ಲೋಕಸಭಾ ಚುನಾವಣೆಯ ಜೊತೆ ಜೊತೆಗೆ ನಡೆದ ಅಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ನೇತೃತ್ವದ ಮೈತ್ರಿಕೂಟ ಭರ್ಜರಿ ಜಯಗಳಿಸಿದೆ. ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ್‌ ರೆಡ್ಡಿ ಅವರಿಗೆ ತೀವ್ರ ಹಿನ್ನಡೆ ಆಗಿದೆ.

ಆಂಧ್ರಪ್ರದೇಶದಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಕೂಟವು ಆಡಳಿತಾರೂಢ ವೈಎಸ್ಆ‌ರ್‌ಪಿಯನ್ನು ಹೀನಾಯವಾಗಿ ಸೋಲಿಸಿದೆ. ಆ ಮೂಲಕ 5 ವರ್ಷಗಳ ನಂತರ ಮತ್ತೆ ಟಿಡಿಪಿ ನೆಲೆ ಕಂಡುಕೊಂಡಿದೆ. ಆದರೆ, ಕಾಂಗ್ರೆಸ್ ಇಲ್ಲಿ ಶೂನ್ಯವಾಗಿದ್ದು, ಇಂಡಿಯಾ ಕೂಟವು ಖಾತೆ ತೆರೆಯದೇ ಇರುವುದು ಆಶ್ಚರ್ಯವಾಗಿದೆ.

175 ಸದಸ್ಯ ಬಲದ ವಿಧಾನಸಭೆಯಲ್ಲಿ 126 ವಿಧಾನಸಭೆಯ ಕ್ಷೇತ್ರಗಳಲ್ಲಿ ಜಯಗಳಿಸಿರುವ ಎನ್‌ಡಿಎ 126 ಕ್ಷೇತ್ರಗಳು, ವೈಎಸ್‌ಆ‌ಪಿ 26, ಇಂಡಿಯಾ 00. ಇತರರು 15 ಕ್ಷೇತ್ರಗಳನ್ನು ಗೆದ್ದಿದ್ದಾರೆ. ಈ ಪೈಕಿ ಎನ್‌ಡಿಎ ಮೈತ್ರಿಯ ಪವನ್‌ ಕಲ್ಯಾಣ್‌ ಪಕ್ಷ 21 ಸೀಟ್‌ಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹಿಡಿಯಲು ಸಜ್ಜಾಗಿದೆ.

ಪ್ರಚಂಡ ಬಹುಮತದೊಂದಿಗೆ ಅಧಿಕಾರದ ಗದ್ದಿಗೆ ಏರಿದೆ. ವೈಎಸ್ ಆರ್ ಸಿಪಿ ಕೇವಲ 22 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಪುಲಿವೆಂದುಲು ಕ್ಷೇತ್ರದಲ್ಲಿ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಗೆಲುವು ಸಾಧಿಸಿದ್ದಾರೆ.

ಮತಗಟ್ಟೆ ಸಮೀಕ್ಷೆಗಳ ಪೈಕಿ ಕೆಲವು ಅತಂತ್ರ ಕೊಟ್ಟಿದ್ದವು. ಚಂದ್ರಬಾಬು ನಾಯ್ಡು ಮತ್ತೊಮ್ಮೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

1 hour ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

1 hour ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

1 hour ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

2 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

3 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

4 hours ago