ದೇಶ- ವಿದೇಶ

ಆಂಧ್ರಪ್ರದೇಶ: ಭರ್ಜರಿ ಬಹುಮತ ಪಡೆದ ಟಿಡಿಪಿ ನೇತೃತ್ವದ ಮೈತ್ರಿಗೆ ಜಯ

ನವದೆಹಲಿ: ಲೋಕಸಭಾ ಚುನಾವಣೆಯ ಜೊತೆ ಜೊತೆಗೆ ನಡೆದ ಅಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ನೇತೃತ್ವದ ಮೈತ್ರಿಕೂಟ ಭರ್ಜರಿ ಜಯಗಳಿಸಿದೆ. ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ್‌ ರೆಡ್ಡಿ ಅವರಿಗೆ ತೀವ್ರ ಹಿನ್ನಡೆ ಆಗಿದೆ.

ಆಂಧ್ರಪ್ರದೇಶದಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಕೂಟವು ಆಡಳಿತಾರೂಢ ವೈಎಸ್ಆ‌ರ್‌ಪಿಯನ್ನು ಹೀನಾಯವಾಗಿ ಸೋಲಿಸಿದೆ. ಆ ಮೂಲಕ 5 ವರ್ಷಗಳ ನಂತರ ಮತ್ತೆ ಟಿಡಿಪಿ ನೆಲೆ ಕಂಡುಕೊಂಡಿದೆ. ಆದರೆ, ಕಾಂಗ್ರೆಸ್ ಇಲ್ಲಿ ಶೂನ್ಯವಾಗಿದ್ದು, ಇಂಡಿಯಾ ಕೂಟವು ಖಾತೆ ತೆರೆಯದೇ ಇರುವುದು ಆಶ್ಚರ್ಯವಾಗಿದೆ.

175 ಸದಸ್ಯ ಬಲದ ವಿಧಾನಸಭೆಯಲ್ಲಿ 126 ವಿಧಾನಸಭೆಯ ಕ್ಷೇತ್ರಗಳಲ್ಲಿ ಜಯಗಳಿಸಿರುವ ಎನ್‌ಡಿಎ 126 ಕ್ಷೇತ್ರಗಳು, ವೈಎಸ್‌ಆ‌ಪಿ 26, ಇಂಡಿಯಾ 00. ಇತರರು 15 ಕ್ಷೇತ್ರಗಳನ್ನು ಗೆದ್ದಿದ್ದಾರೆ. ಈ ಪೈಕಿ ಎನ್‌ಡಿಎ ಮೈತ್ರಿಯ ಪವನ್‌ ಕಲ್ಯಾಣ್‌ ಪಕ್ಷ 21 ಸೀಟ್‌ಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹಿಡಿಯಲು ಸಜ್ಜಾಗಿದೆ.

ಪ್ರಚಂಡ ಬಹುಮತದೊಂದಿಗೆ ಅಧಿಕಾರದ ಗದ್ದಿಗೆ ಏರಿದೆ. ವೈಎಸ್ ಆರ್ ಸಿಪಿ ಕೇವಲ 22 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಪುಲಿವೆಂದುಲು ಕ್ಷೇತ್ರದಲ್ಲಿ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಗೆಲುವು ಸಾಧಿಸಿದ್ದಾರೆ.

ಮತಗಟ್ಟೆ ಸಮೀಕ್ಷೆಗಳ ಪೈಕಿ ಕೆಲವು ಅತಂತ್ರ ಕೊಟ್ಟಿದ್ದವು. ಚಂದ್ರಬಾಬು ನಾಯ್ಡು ಮತ್ತೊಮ್ಮೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

3 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

3 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

3 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

3 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

3 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

3 hours ago