ಅಮರಾವತಿ: ತೆಲಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಇಂದು(ಜೂ.12) ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರಿ ವಹಿಸಿಕೊಂಡಂತಾಗಿದೆ.
ಮಂಗಳವಾರ ಆಂಧ್ರಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್ ಅವರು ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು. ಅದರಂತೆ ಬಹುಮತ ಹೊಂದಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಭದ್ರತೆ ಕಲ್ಪಿಸಲಾಗಿತ್ತು. ಚಂದ್ರಬಾಬು ನಾಯ್ಡು ಜೊತೆಗೆ ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಕೂಡ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕೆಲ ತಿಂಗಳುಗಳ ಹಿಂದಷ್ಟೇ ಮನಿ ಲಾಂಡರಿಂಗ್ ತನಿಖೆಯಲ್ಲಿ ಜಾರಿ ನಿರ್ದೇಶನಾಲಯದಿಂದ(ಇಡಿ) ಜೈಲು ಸೇರಿದ್ದ ಚಂದ್ರನಾಯ್ಡು ನಾಯ್ಡು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನಂತರು ಅವರು ತಮ್ಮ ಟಿಡಿಪಿಯನ್ನು ಬಿಜೆಪಿ ಮತ್ತು ಜನಸೇನೆಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಎದುರಿಸಿ, ಭರ್ಜರಿ ಗೆಲುವು ಸಾಧಿಸಿದ್ದರು.
ಚಂದ್ರಬಾಬು ನಾಯ್ಡು ಅವರೊಂದಿಗೆ, ಅವರ ಪುತ್ರ ನಾರಾ ಲೋಕೇಶ್ ಹಾಗೂ ನಟ ಪವನ್ ಕಲ್ಯಾಣ್ ಸೇರಿದಂತೆ 23 ಮಂದಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಾಯ್ಡು ಕ್ಯಾಬಿನೆಟ್ನಲ್ಲಿ ಜನಸೇನೆಗೆ ಮೂರು ಹಾಗೂ ಬಿಜೆಯ ಒಬ್ಬರಿಗೆ ಅವಕಾಶ ನೀಡಲಾಗಿದೆ.
ಆಂಧ್ರಪ್ರದೇಶದ ವಿಜಯವಾಢದಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಸೂಪರ್ಸ್ಟಾರ್ ರಜನಿಕಾಂತ್, ನಟ ಚಿರಂಜೀವಿ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.
ಈ(2024) ಬಾರಿಯ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 175 ಸ್ಥಾನಗಳ ಪೈಕಿ ಎನ್ಡಿಎ 164 ಸ್ಥಾನಗಳನ್ನು ಗಳಿಸಿತ್ತು. ಟಿಡಿಪಿ 135 ಸ್ಥಾನಗಳನ್ನು ಗೆದ್ದಿತ್ತು. ಪವನ್ ಕಲ್ಯಾಣ್ ಅವರ ಜನಸೇನೆ 21 ಸ್ಥಾನಗಳಿಸಿ ಬಿಜೆಪಿ 8 ಸ್ಥಾನಗಳನ್ನು ಗಳಿಸಿತ್ತು. ಇನ್ನೂ ಆಡಳಿತರೂಢ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷ ಕೇವಲ 11 ಸ್ಥಾನಗಳನ್ನು ಮಾತ್ರ ಗಳಿಸಿಕೊಂಡಿದೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…