ನವದೆಹಲಿ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಭಾನುವಾರ ರಾತ್ರಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಅಲ್ಲದೆ ಒಂದು ವಾರದಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಸ್ಪಷ್ಟತೆ ನೀಡುವಂತೆ ಕುಮಾರಸ್ವಾಮಿ ಬಳಿ ಯೋಗೇಶ್ವರ್ ಕೇಳಿಕೊಂಡಿದ್ದಾರೆ.
ನೀವು ಒಪ್ಪಿದರೆ ನಾನೇ ಅಭ್ಯರ್ಥಿಯಾಗುತ್ತೇನೆ .ಇಲ್ಲವಾದಲ್ಲಿ ನಿಖಿಲ್ ಅಭ್ಯರ್ಥಿಯಾದರೂ ನಾನು ಬೆಂಬಲ ನೀಡುತ್ತೇನೆ. ನೀವೇ ಮುಂದೆ ನಿಂತು ಉಪಚುನಾವಣೆ ನಡೆಸಬೇಕು. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ತಯಾರಿ ಆರಂಭಿಸಿದೆ. ಅಭ್ಯರ್ಥಿಯನ್ನು ಬೇಗ ಘೋಷಿಸಿದರೆ ನಾವು ಸಿದ್ಧತೆ ಆರಂಭಿಸಬಹುದು ಎಂದು ಯೋಗೇಶ್ವರ್ ಹೇಳಿದ್ದಾರೆ. ಇದೇ ವೇಳೆ ಕುಮಾರಸ್ವಾಮಿ ಮಾತನಾಡಿ, ಈ ವಾರ ಬೆಂಗಳೂರಿಗೆ ಬರುತ್ತೇನೆ. ಮತ್ತೊಮ್ಮೆ ಚರ್ಚಿಸಿ ನಿರ್ಧರಿಸೋಣ ಎಂದು ಹೇಳಿದ್ದಾರೆ
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…