ದೆಹಲಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಮ್ಮ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕ್ಷೇತ್ರದಲ್ಲಿ ಮತ್ತೆ ಪಾರುಪತ್ಯ ಸಾಧಿಸಲು ಎಚ್.ಡಿ.ಕುಮಾರಸ್ವಾಮಿ ಬಿಗ್ ಪ್ಲಾನ್ ರೂಪಿಸಿದ್ದಾರೆ.
ಕಾಂಗ್ರೆಸ್ನಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬರುತ್ತಿರುವ ಬೆನ್ನಲ್ಲೇ ಕುಮಾರಸ್ವಾಮಿ ಈಗ ಸಖತ್ ಪ್ಲಾನ್ ರೂಪಿಸುತ್ತಿದ್ದು, ಈಗಿನಿಂದಲೇ ಚನ್ನಪಟ್ಟಣದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಅವರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಉಪಚುನಾವಣೆ ನಡೆಯಲು ಇನ್ನೂ ಸಾಕಷ್ಟು ಸಮಯ ಇದೆ. ಸಮಯ ಬಂದಾಗಲೇ ಅಭ್ಯರ್ಥಿ ಆಯ್ಕೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಕಾಂಗ್ರೆಸ್ನಿಂದ ಡಿಕೆಶಿ ಅಲ್ಲಾ ಯಾರೇ ಬಂದರೂ ಕ್ಷೇತ್ರದ ಜನತೆ ನಮ್ಮನ್ನು ಕೈಬಿಡಲ್ಲ. ಹಾಗಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡಿ ಭಾರೀ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…