ದೇಶ- ವಿದೇಶ

ಕೇಂದ್ರ ಬಜೆಟ್‌ 2024-25: ಈ ಬಾರಿ ಯಾವುದು ಅಗ್ಗ ಯಾವುದು ತುಟ್ಟಿ? ಇಲ್ಲಿದೆ ನೋಡಿ

ನವದೆಹಲಿ: ವಿಕಸಿತ ಭಾರತಕ್ಕೆ ಶಕ್ತಿ ತುಂಬು ಉದ್ದೇಶದಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ 2025ರ ಪೂರ್ವಭಾವಿ ಬಜೆಟ್‌ ಮಂಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮ್‌ ಅವರು ಸತತ 7ನೇ ಬಾರಿಗೆ ದಾಖಲೆಯ ಬಜೆಟ್‌ ಮಂಡಿಸಿ ಗಮನ ಸೆಳೆದರು.

ದೇಶದ ಜನರಿಗೆ ಈ ಬಾರಿಯ ಬಜೆಟ್‌ ಮೇಲೆ ಹೆಚ್ಚಿನ ಕಣ್ಣಾಗಿದ್ದು, ಪ್ರಮುಖವಾಗಿ ಮಧ್ಯಮ ವರ್ಗದ ಕುಟುಂಬಗಳು ಯಾವುದಕ್ಕೆಲ್ಲಾ ಬೆಲೆ ದುಬಾರಿ, ಯಾವುದಕ್ಕೆಲ್ಲಾ ಬೆಲೆ ಅಗ್ಗ ಎಂಬ ಬಗ್ಗೆಯೇ ಹೆಚ್ಚಾಗಿ ಗಮನ ಹರಿಸುತ್ತಾರೆ.

ಜನಸಾಮಾನ್ಯರನ್ನೇ ಗಮನದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್‌ ಮಂಡಿಸಿರುವ ಸರ್ಕಾರ ಕೆಲವು ಸರಕು ಸೇವೆಗಳಿಗೆ ಬೆಲೆ ಹೆಚ್ಚು ಮಾಡಿದ್ದರೇ, ಇನ್ನು ಕೆಲವುಗಳಿಗೆ ಇಳಿಕೆ ಮಾಡಿದೆ.

ಯಾವೆಲ್ಲಾ ವಸ್ತುಗಳಿಗೆ ಬೆಲೆ ಏರಿಕೆ ಹಾಗೂ ಇಳಿಕೆಯಾಗಿದೆ ಎಂಬ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ!

ಇವುಗಳೆಲ್ಲಾ ತುಟ್ಟಿ!

* ಆಮದು ಮಾಡಿಕೊಳ್ಳುವ ವಿವಿಧ ರೀತಿಯ ಬಟ್ಟೆ, ವಸ್ತುಗಳ ಮೇಲಿನ ಬೆಲೆ ಏರಿಕೆ
* ಮರು ಬಳಕೆಯಾಗದ ಎಲ್ಲಾ ರೀತಿಯ ಪ್ಲಾಸ್ಟಿಕ್‌ ವಸ್ತುಗಳ ಮೇಲಿನ ಬೆಲೆ ಏರಿಕೆ
* ವಿದ್ಯುತ್‌ ಉಪಕರಣ
* ಪಿವಿಸಿ ಫ್ಲೆಕ್ಸ್‌ ಬ್ಯಾನರ್ಗಳು
* ಸ್ಟೇಟ್‌ ಸ್ಟ್ಯಾಂಪ್‌ ಡ್ಯೂಟಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ
* ಟೆಲಿಕಾಂ ಉಪಕರಣಗಳು

ಇವುಗಳೆಲ್ಲಾ ಅಗ್ಗ!

* ಕ್ಯಾನ್ಸರ್‌ ಔಷಧಗಳ ಮೇಲಿನ ದರ ಇಳಿಕೆ
* ಮೊಬೈಲ್‌ ಫೋನ್‌, ಚಾರ್ಜರ್‌ ಹಾಗೂ ಬಿಡಿ ಭಾಗಗಳು
* ಸೋಲಾರ್‌ ಪ್ಯಾನೆಲ್‌
* ವೈದ್ಯಕೀಯ ಎಕ್ಸ್‌-ರೇ ಯಂತ್ರಗಳು
* ಪಾದರಕ್ಷೆಗಳು
* ಜವಳಿ
* ಚಿನ್ನ, ಬೆಳ್ಳಿ, ಪ್ಲಾಟಿನಂ
* ಟಿವಿ, ವಿದೇಶಿ ಬಟ್ಟೆಗಳು, ಚರ್ಮೋತ್ಪನ್ನಗಳು
* ಮೀನು ಮತ್ತು ಸಿಗಡಿ ಆಹಾರ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

56 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

1 hour ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

1 hour ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

1 hour ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago