ದೇಶ- ವಿದೇಶ

ಕೇಂದ್ರ ಬಜೆಟ್‌ 2024-25: ಈ ಬಾರಿ ಯಾವುದು ಅಗ್ಗ ಯಾವುದು ತುಟ್ಟಿ? ಇಲ್ಲಿದೆ ನೋಡಿ

ನವದೆಹಲಿ: ವಿಕಸಿತ ಭಾರತಕ್ಕೆ ಶಕ್ತಿ ತುಂಬು ಉದ್ದೇಶದಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ 2025ರ ಪೂರ್ವಭಾವಿ ಬಜೆಟ್‌ ಮಂಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮ್‌ ಅವರು ಸತತ 7ನೇ ಬಾರಿಗೆ ದಾಖಲೆಯ ಬಜೆಟ್‌ ಮಂಡಿಸಿ ಗಮನ ಸೆಳೆದರು.

ದೇಶದ ಜನರಿಗೆ ಈ ಬಾರಿಯ ಬಜೆಟ್‌ ಮೇಲೆ ಹೆಚ್ಚಿನ ಕಣ್ಣಾಗಿದ್ದು, ಪ್ರಮುಖವಾಗಿ ಮಧ್ಯಮ ವರ್ಗದ ಕುಟುಂಬಗಳು ಯಾವುದಕ್ಕೆಲ್ಲಾ ಬೆಲೆ ದುಬಾರಿ, ಯಾವುದಕ್ಕೆಲ್ಲಾ ಬೆಲೆ ಅಗ್ಗ ಎಂಬ ಬಗ್ಗೆಯೇ ಹೆಚ್ಚಾಗಿ ಗಮನ ಹರಿಸುತ್ತಾರೆ.

ಜನಸಾಮಾನ್ಯರನ್ನೇ ಗಮನದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್‌ ಮಂಡಿಸಿರುವ ಸರ್ಕಾರ ಕೆಲವು ಸರಕು ಸೇವೆಗಳಿಗೆ ಬೆಲೆ ಹೆಚ್ಚು ಮಾಡಿದ್ದರೇ, ಇನ್ನು ಕೆಲವುಗಳಿಗೆ ಇಳಿಕೆ ಮಾಡಿದೆ.

ಯಾವೆಲ್ಲಾ ವಸ್ತುಗಳಿಗೆ ಬೆಲೆ ಏರಿಕೆ ಹಾಗೂ ಇಳಿಕೆಯಾಗಿದೆ ಎಂಬ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ!

ಇವುಗಳೆಲ್ಲಾ ತುಟ್ಟಿ!

* ಆಮದು ಮಾಡಿಕೊಳ್ಳುವ ವಿವಿಧ ರೀತಿಯ ಬಟ್ಟೆ, ವಸ್ತುಗಳ ಮೇಲಿನ ಬೆಲೆ ಏರಿಕೆ
* ಮರು ಬಳಕೆಯಾಗದ ಎಲ್ಲಾ ರೀತಿಯ ಪ್ಲಾಸ್ಟಿಕ್‌ ವಸ್ತುಗಳ ಮೇಲಿನ ಬೆಲೆ ಏರಿಕೆ
* ವಿದ್ಯುತ್‌ ಉಪಕರಣ
* ಪಿವಿಸಿ ಫ್ಲೆಕ್ಸ್‌ ಬ್ಯಾನರ್ಗಳು
* ಸ್ಟೇಟ್‌ ಸ್ಟ್ಯಾಂಪ್‌ ಡ್ಯೂಟಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ
* ಟೆಲಿಕಾಂ ಉಪಕರಣಗಳು

ಇವುಗಳೆಲ್ಲಾ ಅಗ್ಗ!

* ಕ್ಯಾನ್ಸರ್‌ ಔಷಧಗಳ ಮೇಲಿನ ದರ ಇಳಿಕೆ
* ಮೊಬೈಲ್‌ ಫೋನ್‌, ಚಾರ್ಜರ್‌ ಹಾಗೂ ಬಿಡಿ ಭಾಗಗಳು
* ಸೋಲಾರ್‌ ಪ್ಯಾನೆಲ್‌
* ವೈದ್ಯಕೀಯ ಎಕ್ಸ್‌-ರೇ ಯಂತ್ರಗಳು
* ಪಾದರಕ್ಷೆಗಳು
* ಜವಳಿ
* ಚಿನ್ನ, ಬೆಳ್ಳಿ, ಪ್ಲಾಟಿನಂ
* ಟಿವಿ, ವಿದೇಶಿ ಬಟ್ಟೆಗಳು, ಚರ್ಮೋತ್ಪನ್ನಗಳು
* ಮೀನು ಮತ್ತು ಸಿಗಡಿ ಆಹಾರ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

2 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

2 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

2 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

2 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

2 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

2 hours ago