ಜೈಪುರ: ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್ನಲ್ಲಿ ಯೋಧರು ತರಬೇತಿ ಪಡೆಯುವ ಸಂದರ್ಭದಲ್ಲಿ ಟ್ಯಾಂಕರ್ಗೆ ರಾಸಾಯನಿಕ ಭರ್ತಿ ಮಾಡುವಾಗ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೈಪುರ ಬಳಿಯಿರುವ ಬಿಕೇನಾರ್ನ ಫೈರಿಂಗ್ ರೇಂಜ್ನಲ್ಲಿ ಇಂದು(ಡಿಸೆಂಬರ್.18) ಯುದ್ಧ ಟ್ಯಾಂಕರ್ಗೆ ರಾಸಾಯನಿಕ ಭರ್ತಿ ಮಾಡುವಾಗ ಚಾರ್ಜರ್ ಸ್ಫೋಟಗೊಂಡು ಈ ಘಟನೆ ಸಂಭವಿಸಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.
ಈ ಘಟನೆ ಸಂಭವಿಸಿದಾಗ ಇಬ್ಬರು ಯೋಧರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿದ್ದರು.ಆದರೆ ಗಾಯಗೊಂಡ ಇಬ್ಬರು ಯೋಧರು ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ. ಈ ಇಬ್ಬರನ್ನು ಉತ್ತರಪ್ರದೇಶದ ಅಶುತೋಷ್ ಮಿಶ್ರಾ ಹಾಗೂ ರಾಜಸ್ಥಾನ ಮೂಲದ ಜಿತೇಂದ್ರ ಎಂದು ಗುರುತಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಹಿಂದೆಯೂ ತರಬೇತಿ ವೇಳೆ ಇಂತಹ ಸ್ಫೋಟ ಸಂಭವಿಸಿದ್ದು, ಯೋಧರೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…