ದಂತೇವಾಡ: ಛತ್ತೀಸ್ಗಢದ ಬಸ್ತರ್ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ಪ್ರಕರಣದಲ್ಲಿ ತೆಲಂಗಾಣ ರಾಜ್ಯದ ವಾರಂಗಲ್ ಮೂಲದ ನಿವಾಸಿಯಾಗಿದ್ದ ನಕ್ಸಲ್ ಮಹಿಳೆ ರೇಣುಕಾ ಅಲಿಯಾಸ್ ಸರಸ್ವತಿ ಸಾವನ್ನಪ್ಪಿದ್ದಾರೆ.
ಗೀದಮ(ದಂತೇವಾಡ) ಮತ್ತು ಭೈರಮಗಢ(ಬಿಜಾಪುರ) ಅರಣ್ಯ ಪ್ರದೇಶದಲ್ಲಿ ಇಂದು(ಮಾರ್ಚ್.31) ಸುಮಾರು ಬೆಳಿಗ್ಗೆ 9 ಗಂಟೆಯ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಎನ್ಕೌಂಟರ್ ಮುಗಿದ ಬಳಿಕ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಸಿಬ್ಬಂದಿಗಳಿಗೆ ಮಹಿಳಾ ನಕ್ಸಲ್ ಮೃತದೇಹ ಪತ್ತೆಯಾಗಿದೆ. ಅಲ್ಲದೇ ಭದ್ರತಾ ಸಿಬ್ಬಂದಿಗಳು ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಹಾಗೂ ರೈಫಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರಾಯ್ ಹೇಳಿದ್ದಾರೆ.
ಇನ್ನು ಮೃತರಾದ ನಕ್ಸಲ್ ಮಹಿಳೆಯೂ ನಕ್ಸಲ ವಿಶೇಷ ವಲಯ ಸಮಿತಿ ಸದಸ್ಯರಾಗಿದ್ದರು. ಅಲ್ಲದೇ , ದಂಡಕಾರಣ್ಯ ವಿಶೇಷ ವಲಯ ಸಮಿತಿಯ ಪತ್ರಿಕಾ ತಂಡದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…