ದೇಶ- ವಿದೇಶ

ಛತ್ತೀಸ್‌ಗಢ|ಎನ್‌ಕೌಂಟರ್‌ನಲ್ಲಿ ವಾರಂಗಲ್‌ನ ನಕ್ಸಲ್‌ ರೇಣುಕಾ ಸಾವು

ದಂತೇವಾಡ: ಛತ್ತೀಸ್‌ಗಢದ ಬಸ್ತರ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಪ್ರಕರಣದಲ್ಲಿ ತೆಲಂಗಾಣ ರಾಜ್ಯದ ವಾರಂಗಲ್‌ ಮೂಲದ ನಿವಾಸಿಯಾಗಿದ್ದ ನಕ್ಸಲ್‌ ಮಹಿಳೆ ರೇಣುಕಾ ಅಲಿಯಾಸ್‌ ಸರಸ್ವತಿ ಸಾವನ್ನಪ್ಪಿದ್ದಾರೆ.

ಗೀದಮ(ದಂತೇವಾಡ) ಮತ್ತು ಭೈರಮಗಢ(ಬಿಜಾಪುರ) ಅರಣ್ಯ ಪ್ರದೇಶದಲ್ಲಿ ಇಂದು(ಮಾರ್ಚ್‌.31) ಸುಮಾರು ಬೆಳಿಗ್ಗೆ 9 ಗಂಟೆಯ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಎನ್‌ಕೌಂಟರ್‌ ಮುಗಿದ ಬಳಿಕ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಸಿಬ್ಬಂದಿಗಳಿಗೆ ಮಹಿಳಾ ನಕ್ಸಲ್‌ ಮೃತದೇಹ ಪತ್ತೆಯಾಗಿದೆ. ಅಲ್ಲದೇ ಭದ್ರತಾ ಸಿಬ್ಬಂದಿಗಳು ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಹಾಗೂ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಂತೇವಾಡ ಪೊಲೀಸ್‌ ವರಿಷ್ಠಾಧಿಕಾರಿ ಗೌರವ್‌ ರಾಯ್‌ ಹೇಳಿದ್ದಾರೆ.

ಇನ್ನು ಮೃತರಾದ ನಕ್ಸಲ್‌ ಮಹಿಳೆಯೂ ನಕ್ಸಲ ವಿಶೇಷ ವಲಯ ಸಮಿತಿ ಸದಸ್ಯರಾಗಿದ್ದರು. ಅಲ್ಲದೇ , ದಂಡಕಾರಣ್ಯ ವಿಶೇಷ ವಲಯ ಸಮಿತಿಯ ಪತ್ರಿಕಾ ತಂಡದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಚನ ಎಸ್‌ ಎಸ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago