ಬೆಂಗಳೂರು : ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡದೇ ಇದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸುವಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂರವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆಗೆ ಸಲಹೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಪಿ.ಚಿದಂಬರಂ, ಅಮೆರಿಕದಲ್ಲಿ ನಡೆಯುವ ಕೆಲ ಕಾರ್ಯಕ್ರಮಗಳಿಗೆ ಆಹ್ವಾನದ ಮೇರೆಗೆ ತೆರಳಲು ಪ್ರಿಯಾಂಕ್ ಖರ್ಗೆ ಮುಂದಾಗಿದ್ದರು. ಅಲ್ಲಿ ಬಂಡವಾಳ ಹೂಡಿಕೆದಾರರು ಹಾಗೂ ವಿವಿಧ ಕ್ಷೇತ್ರಗಳ ಪರಿಣಿತರ ಜೊತೆ ಚರ್ಚೆ ನಿಗದಿಯಾಗಿತ್ತು. ಆದರೆ ಪ್ರಿಯಾಂಕ್ ಖರ್ಗೆಯವರಿಗೆ ಅಮೆರಿಕ ಪ್ರವಾಸಕ್ಕೆ ಅನುಮತಿ ನೀಡದೆ ಭಾರೀ ನಿರಾಸೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಕೇಂದ್ರ ಸರ್ಕಾರ ತಕ್ಷಣವೇ ಉತ್ತರ ನೀಡಬೇಕು. ಆ ಉತ್ತರ ಸಮರ್ಪಕವಾಗಿಲ್ಲ ಎಂದಾದರೆ ಪ್ರಿಯಾಂಕ್ ಖರ್ಗೆಯವರು ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ.
ಪ್ರತಿಯೊಬ್ಬರಿಗೂ ಪ್ರವಾಸ ಮಾಡುವ ಮತ್ತು ಮಾತನಾಡುವ ಸ್ವಾತಂತ್ರ್ಯ ಇದೆ. ಕೇಂದ್ರ ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಸರ್ವಾಧಿಕಾರಿಯಂತೆ ವರ್ತಿಸುವುದು ಸರಿಯಲ್ಲ ಎಂದು ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…