ದೇಶ- ವಿದೇಶ

ಅಮೆರಿಕ ಪ್ರವಾಸ ನಿರಾಕರಣೆ : ಪ್ರಿಯಾಂಕ್‌ ಖರ್ಗೆ ಕೋರ್ಟ್‌ ಮೆಟ್ಟಿಲೇರಲು ಚಿದಂಬರಂ ಸಲಹೆ

ಬೆಂಗಳೂರು : ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡದೇ ಇದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸುವಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂರವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆಗೆ ಸಲಹೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಪಿ.ಚಿದಂಬರಂ, ಅಮೆರಿಕದಲ್ಲಿ ನಡೆಯುವ ಕೆಲ ಕಾರ್ಯಕ್ರಮಗಳಿಗೆ ಆಹ್ವಾನದ ಮೇರೆಗೆ ತೆರಳಲು ಪ್ರಿಯಾಂಕ್ ಖರ್ಗೆ ಮುಂದಾಗಿದ್ದರು. ಅಲ್ಲಿ ಬಂಡವಾಳ ಹೂಡಿಕೆದಾರರು ಹಾಗೂ ವಿವಿಧ ಕ್ಷೇತ್ರಗಳ ಪರಿಣಿತರ ಜೊತೆ ಚರ್ಚೆ ನಿಗದಿಯಾಗಿತ್ತು. ಆದರೆ ಪ್ರಿಯಾಂಕ್ ಖರ್ಗೆಯವರಿಗೆ ಅಮೆರಿಕ ಪ್ರವಾಸಕ್ಕೆ ಅನುಮತಿ ನೀಡದೆ ಭಾರೀ ನಿರಾಸೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ತಕ್ಷಣವೇ ಉತ್ತರ ನೀಡಬೇಕು. ಆ ಉತ್ತರ ಸಮರ್ಪಕವಾಗಿಲ್ಲ ಎಂದಾದರೆ ಪ್ರಿಯಾಂಕ್ ಖರ್ಗೆಯವರು ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ.

ಪ್ರತಿಯೊಬ್ಬರಿಗೂ ಪ್ರವಾಸ ಮಾಡುವ ಮತ್ತು ಮಾತನಾಡುವ ಸ್ವಾತಂತ್ರ್ಯ ಇದೆ. ಕೇಂದ್ರ ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಸರ್ವಾಧಿಕಾರಿಯಂತೆ ವರ್ತಿಸುವುದು ಸರಿಯಲ್ಲ ಎಂದು ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

59 seconds ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

6 mins ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

11 mins ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

16 mins ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

21 mins ago

ಪ್ರಮುಖ ಪಕ್ಷಗಳಿಗೆ ಪ್ರತಿಷ್ಠೆಯಾದ ಟಿಎಪಿಸಿಎಂಎಸ್ ಚುನಾವಣೆ

ಮಂಜು ಕೋಟೆ ಕೋಟೆ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಶುರು; ಮುಖಂಡರಿಂದ ಕಾರ್ಯತಂತ್ರ ಎಚ್.ಡಿ.ಕೋಟೆ: ತಾಲ್ಲೂಕಿನ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

25 mins ago