ದೇಶ- ವಿದೇಶ

ಅಮೆರಿಕ ಪ್ರವಾಸ ನಿರಾಕರಣೆ : ಪ್ರಿಯಾಂಕ್‌ ಖರ್ಗೆ ಕೋರ್ಟ್‌ ಮೆಟ್ಟಿಲೇರಲು ಚಿದಂಬರಂ ಸಲಹೆ

ಬೆಂಗಳೂರು : ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡದೇ ಇದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸುವಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂರವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆಗೆ ಸಲಹೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಪಿ.ಚಿದಂಬರಂ, ಅಮೆರಿಕದಲ್ಲಿ ನಡೆಯುವ ಕೆಲ ಕಾರ್ಯಕ್ರಮಗಳಿಗೆ ಆಹ್ವಾನದ ಮೇರೆಗೆ ತೆರಳಲು ಪ್ರಿಯಾಂಕ್ ಖರ್ಗೆ ಮುಂದಾಗಿದ್ದರು. ಅಲ್ಲಿ ಬಂಡವಾಳ ಹೂಡಿಕೆದಾರರು ಹಾಗೂ ವಿವಿಧ ಕ್ಷೇತ್ರಗಳ ಪರಿಣಿತರ ಜೊತೆ ಚರ್ಚೆ ನಿಗದಿಯಾಗಿತ್ತು. ಆದರೆ ಪ್ರಿಯಾಂಕ್ ಖರ್ಗೆಯವರಿಗೆ ಅಮೆರಿಕ ಪ್ರವಾಸಕ್ಕೆ ಅನುಮತಿ ನೀಡದೆ ಭಾರೀ ನಿರಾಸೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ತಕ್ಷಣವೇ ಉತ್ತರ ನೀಡಬೇಕು. ಆ ಉತ್ತರ ಸಮರ್ಪಕವಾಗಿಲ್ಲ ಎಂದಾದರೆ ಪ್ರಿಯಾಂಕ್ ಖರ್ಗೆಯವರು ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ.

ಪ್ರತಿಯೊಬ್ಬರಿಗೂ ಪ್ರವಾಸ ಮಾಡುವ ಮತ್ತು ಮಾತನಾಡುವ ಸ್ವಾತಂತ್ರ್ಯ ಇದೆ. ಕೇಂದ್ರ ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಸರ್ವಾಧಿಕಾರಿಯಂತೆ ವರ್ತಿಸುವುದು ಸರಿಯಲ್ಲ ಎಂದು ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

1 hour ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

6 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

6 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

6 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

6 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

9 hours ago