ದೇಶ- ವಿದೇಶ

ಚೀನಾ ವಿರುದ್ಧದ ಅಮೆರಿಕದ ಸಮಿತಿ ಸದಸ್ಯರಾಗಿ ಭಾರತ ಮೂಲದ ರಾಜಾ ಕೃಷ್ಣಮೂರ್ತಿ ನೇಮಕ

ವಾಷಿಂಗ್ಟನ್: ಅಮೆರಿಕ ಮತ್ತು ಜಗತ್ತಿಗೇ ಬೆದರಿಕೆ ಒಡ್ಡುತ್ತಿರುವ ಚೀನಾದ ವಿವಿಧ ನಡವಳಿಕೆಗಳ ಕುರಿತಾದ ಅಂಶಗಳನ್ನು ಪರಿಶೀಲಿಸಲು ಹೊಸದಾಗಿ ರಚಿಸಲಾಗಿರುವ ಅಮೆರಿಕದ ಸಂಸತ್ತಿನ ಸದನ ಸಮಿತಿಯ ಸದಸ್ಯರಾಗಿ ಭಾರತ ಮೂಲದ ಅಮೆರಿಕದ ಕಾಂಗ್ರೆಸ್ಸಿಗ ರಾಜಾ ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.

ಅಮೆರಿಕದ ಪ್ರಜಾಪ್ರತಿನಿಧಿ ಸಭೆಯ ನಾಯಕ ಹಕೀಮ್ ಜೆಫ್ರೀಸ್ ಅವರು ಅಮೆರಿಕ ಮತ್ತು ಚೀನಾದ ಕಮ್ಯುನಿಸ್ಟ್ ಪಾರ್ಟಿ (ಸಿಸಿಪಿ) ನಡುವಿನ ಕಾರ್ಯತಂತ್ರದ ಸ್ಪರ್ಧೆಯ ಕುರಿತು ಪರಿಶೀಲನೆಗೆ ರಚಿಸಲಾದ ಸಮಿತಿಯ ಸದಸ್ಯರಾಗಿ ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಿರುವುದಾಗಿ ಬುಧವಾರ ಪ್ರಕಟಿಸಿದರು.

ಈ ಹೊಸ ಸಮಿತಿಗೆ ಭಾರತ ಮೂಲದ ಇನ್ನೊಬ್ಬ ಕಾಂಗ್ರೆಸ್‌ ಸದಸ್ಯರಾದ ರೋ ಖನ್ನಾ ಅವರನ್ನೂ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

‘ಅಮೆರಿಕ ಮತ್ತು ಚೀನಾದ ಕಮ್ಯುನಿಸ್ಟ್ ಪಕ್ಷದ ನಡುವಿನ ಕಾರ್ಯತಂತ್ರದ ಕುರಿತಾದ ಸದನ ಸಮಿತಿಗೆ ನನ್ನನ್ನು ನೇಮಿಸಿದ್ದಕ್ಕಾಗಿ ಸದನದ ನಾಯಕ ಹಕೀಮ್ ಜೆಫ್ರೀಸ್ ಅವರಿಗೆ ನಾನು ಕೃತಜ್ಞನಾಗಿದ್ದೇನೆ’ ಎಂದು ಕೃಷ್ಣಮೂರ್ತಿ ಹೇಳಿದರು.

‘ತೈವಾನ್‌ನ ಪ್ರಜಾಪ್ರಭುತ್ವದ ವಿರುದ್ಧದ ಬೆದರಿಕೆ, ಟಿಕ್‌ಟಾಕ್‌ನ ಆಯುಧೀಕರಣ ಮತ್ತು ನೂರಾರು ಶತಕೋಟಿ ಡಾಲರ್ ಮೌಲ್ಯದ ಅಮೆರಿಕದ ಬೌದ್ಧಿಕ ಆಸ್ತಿ ಕಳ್ಳತನ ಮಾಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷವು ಅಮೆರಿಕ ಮತ್ತು ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ಹಾಗೂ ಸಮೃದ್ಧಿಗೆ ಗಂಭೀರವಾದ ಆರ್ಥಿಕ ಮತ್ತು ಭದ್ರತಾ ಬೆದರಿಕೆಗಳನ್ನು ಒಡ್ಡುತ್ತಿದೆ’ ಎಂದು ಅವರು ಹೇಳಿದರು.

andolanait

Recent Posts

ಸಮಾಜ ಬದಲಾವಣೆಗೆ ಶಿಕ್ಷಣ ಅಗತ್ಯ : ಸಿಎಂ ಪ್ರತಿಪಾದನೆ

ಮೈಸೂರು : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

32 mins ago

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಮಾಜಿ ಸಿ.ಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ…

41 mins ago

ಹನೂರು: ಕಾಡಾನೆ ದಾಳಿಗೆ ಸಿಲುಕಿ ರೈತನ ಕಾಲು ಮುರಿತ

ಮಹಾದೇಶ್‌ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ…

4 hours ago

ಮೊದಲು ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ…

4 hours ago

ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ…

4 hours ago

ಅರಣ್ಯ ಪ್ರದೇಶದ ಹೊರಗಡೆ ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ…

4 hours ago