ವಾಷಿಂಗ್ಟನ್: ಅಮೆರಿಕ ಮತ್ತು ಜಗತ್ತಿಗೇ ಬೆದರಿಕೆ ಒಡ್ಡುತ್ತಿರುವ ಚೀನಾದ ವಿವಿಧ ನಡವಳಿಕೆಗಳ ಕುರಿತಾದ ಅಂಶಗಳನ್ನು ಪರಿಶೀಲಿಸಲು ಹೊಸದಾಗಿ ರಚಿಸಲಾಗಿರುವ ಅಮೆರಿಕದ ಸಂಸತ್ತಿನ ಸದನ ಸಮಿತಿಯ ಸದಸ್ಯರಾಗಿ ಭಾರತ ಮೂಲದ ಅಮೆರಿಕದ ಕಾಂಗ್ರೆಸ್ಸಿಗ ರಾಜಾ ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.
ಅಮೆರಿಕದ ಪ್ರಜಾಪ್ರತಿನಿಧಿ ಸಭೆಯ ನಾಯಕ ಹಕೀಮ್ ಜೆಫ್ರೀಸ್ ಅವರು ಅಮೆರಿಕ ಮತ್ತು ಚೀನಾದ ಕಮ್ಯುನಿಸ್ಟ್ ಪಾರ್ಟಿ (ಸಿಸಿಪಿ) ನಡುವಿನ ಕಾರ್ಯತಂತ್ರದ ಸ್ಪರ್ಧೆಯ ಕುರಿತು ಪರಿಶೀಲನೆಗೆ ರಚಿಸಲಾದ ಸಮಿತಿಯ ಸದಸ್ಯರಾಗಿ ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಿರುವುದಾಗಿ ಬುಧವಾರ ಪ್ರಕಟಿಸಿದರು.
ಈ ಹೊಸ ಸಮಿತಿಗೆ ಭಾರತ ಮೂಲದ ಇನ್ನೊಬ್ಬ ಕಾಂಗ್ರೆಸ್ ಸದಸ್ಯರಾದ ರೋ ಖನ್ನಾ ಅವರನ್ನೂ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
‘ಅಮೆರಿಕ ಮತ್ತು ಚೀನಾದ ಕಮ್ಯುನಿಸ್ಟ್ ಪಕ್ಷದ ನಡುವಿನ ಕಾರ್ಯತಂತ್ರದ ಕುರಿತಾದ ಸದನ ಸಮಿತಿಗೆ ನನ್ನನ್ನು ನೇಮಿಸಿದ್ದಕ್ಕಾಗಿ ಸದನದ ನಾಯಕ ಹಕೀಮ್ ಜೆಫ್ರೀಸ್ ಅವರಿಗೆ ನಾನು ಕೃತಜ್ಞನಾಗಿದ್ದೇನೆ’ ಎಂದು ಕೃಷ್ಣಮೂರ್ತಿ ಹೇಳಿದರು.
‘ತೈವಾನ್ನ ಪ್ರಜಾಪ್ರಭುತ್ವದ ವಿರುದ್ಧದ ಬೆದರಿಕೆ, ಟಿಕ್ಟಾಕ್ನ ಆಯುಧೀಕರಣ ಮತ್ತು ನೂರಾರು ಶತಕೋಟಿ ಡಾಲರ್ ಮೌಲ್ಯದ ಅಮೆರಿಕದ ಬೌದ್ಧಿಕ ಆಸ್ತಿ ಕಳ್ಳತನ ಮಾಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷವು ಅಮೆರಿಕ ಮತ್ತು ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ಹಾಗೂ ಸಮೃದ್ಧಿಗೆ ಗಂಭೀರವಾದ ಆರ್ಥಿಕ ಮತ್ತು ಭದ್ರತಾ ಬೆದರಿಕೆಗಳನ್ನು ಒಡ್ಡುತ್ತಿದೆ’ ಎಂದು ಅವರು ಹೇಳಿದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…