ದೇಶ- ವಿದೇಶ

ಚೀನಾ ವಿರುದ್ಧದ ಅಮೆರಿಕದ ಸಮಿತಿ ಸದಸ್ಯರಾಗಿ ಭಾರತ ಮೂಲದ ರಾಜಾ ಕೃಷ್ಣಮೂರ್ತಿ ನೇಮಕ

ವಾಷಿಂಗ್ಟನ್: ಅಮೆರಿಕ ಮತ್ತು ಜಗತ್ತಿಗೇ ಬೆದರಿಕೆ ಒಡ್ಡುತ್ತಿರುವ ಚೀನಾದ ವಿವಿಧ ನಡವಳಿಕೆಗಳ ಕುರಿತಾದ ಅಂಶಗಳನ್ನು ಪರಿಶೀಲಿಸಲು ಹೊಸದಾಗಿ ರಚಿಸಲಾಗಿರುವ ಅಮೆರಿಕದ ಸಂಸತ್ತಿನ ಸದನ ಸಮಿತಿಯ ಸದಸ್ಯರಾಗಿ ಭಾರತ ಮೂಲದ ಅಮೆರಿಕದ ಕಾಂಗ್ರೆಸ್ಸಿಗ ರಾಜಾ ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.

ಅಮೆರಿಕದ ಪ್ರಜಾಪ್ರತಿನಿಧಿ ಸಭೆಯ ನಾಯಕ ಹಕೀಮ್ ಜೆಫ್ರೀಸ್ ಅವರು ಅಮೆರಿಕ ಮತ್ತು ಚೀನಾದ ಕಮ್ಯುನಿಸ್ಟ್ ಪಾರ್ಟಿ (ಸಿಸಿಪಿ) ನಡುವಿನ ಕಾರ್ಯತಂತ್ರದ ಸ್ಪರ್ಧೆಯ ಕುರಿತು ಪರಿಶೀಲನೆಗೆ ರಚಿಸಲಾದ ಸಮಿತಿಯ ಸದಸ್ಯರಾಗಿ ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಿರುವುದಾಗಿ ಬುಧವಾರ ಪ್ರಕಟಿಸಿದರು.

ಈ ಹೊಸ ಸಮಿತಿಗೆ ಭಾರತ ಮೂಲದ ಇನ್ನೊಬ್ಬ ಕಾಂಗ್ರೆಸ್‌ ಸದಸ್ಯರಾದ ರೋ ಖನ್ನಾ ಅವರನ್ನೂ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

‘ಅಮೆರಿಕ ಮತ್ತು ಚೀನಾದ ಕಮ್ಯುನಿಸ್ಟ್ ಪಕ್ಷದ ನಡುವಿನ ಕಾರ್ಯತಂತ್ರದ ಕುರಿತಾದ ಸದನ ಸಮಿತಿಗೆ ನನ್ನನ್ನು ನೇಮಿಸಿದ್ದಕ್ಕಾಗಿ ಸದನದ ನಾಯಕ ಹಕೀಮ್ ಜೆಫ್ರೀಸ್ ಅವರಿಗೆ ನಾನು ಕೃತಜ್ಞನಾಗಿದ್ದೇನೆ’ ಎಂದು ಕೃಷ್ಣಮೂರ್ತಿ ಹೇಳಿದರು.

‘ತೈವಾನ್‌ನ ಪ್ರಜಾಪ್ರಭುತ್ವದ ವಿರುದ್ಧದ ಬೆದರಿಕೆ, ಟಿಕ್‌ಟಾಕ್‌ನ ಆಯುಧೀಕರಣ ಮತ್ತು ನೂರಾರು ಶತಕೋಟಿ ಡಾಲರ್ ಮೌಲ್ಯದ ಅಮೆರಿಕದ ಬೌದ್ಧಿಕ ಆಸ್ತಿ ಕಳ್ಳತನ ಮಾಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷವು ಅಮೆರಿಕ ಮತ್ತು ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ಹಾಗೂ ಸಮೃದ್ಧಿಗೆ ಗಂಭೀರವಾದ ಆರ್ಥಿಕ ಮತ್ತು ಭದ್ರತಾ ಬೆದರಿಕೆಗಳನ್ನು ಒಡ್ಡುತ್ತಿದೆ’ ಎಂದು ಅವರು ಹೇಳಿದರು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

2 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

15 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

17 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

21 hours ago