ದೇಶ- ವಿದೇಶ

ಕ್ರಿಸ್‌ಮಸ್‌ ಆಚರಣೆ: ಕೈಸ್ತ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಆಚರಣೆ ಜೋರಾಗಿದ್ದು, ಕ್ರೈಸ್ತ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್‌ಮಸ್‌ ಶುಭಾಶಯವನ್ನು ಕೋರಿದ್ದಾರೆ.

ಭಾರತದಾದ್ಯಂತ ಕ್ರೈಸ್ತ ಬಾಂಧವರು ಇಂದು(ಡಿಸೆಂಬರ್‌.25) ಕ್ರಿಸ್‌ಮಸ್‌ ಸಂಭ್ರಮದಲ್ಲಿ ಭಾಗಿಯಾಗಿದ್ದು, ತಂಡೋಪತಂಡವಾಗಿ ಚರ್ಚ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಹಬ್ಬದ ಶುಭಾಶಯ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯ ಮೂಲಕ ಶುಭಾಶಯ ಕೋರಿರುವ ಮೋದೊ ಅವರು, ಭಗವಾನ್‌ ಜೀಸಸ್‌ ಅವರು ಹಾಕಿಕೊಟ್‌ ಮಾರ್ಗಗಳಲ್ಲಿ ನಾವು ಸಾಗಬೇಕಿದೆ. ಆ ಮುಖಾಂತರ ಶಾಂತಿ, ಸಹಬಾಳ್ವೆ ಹಾಗೂ ಸಮೃದ್ಧಿಯನ್ನು ಸಾಧಿಸಬೇಕಿದೆ ಎಂದು ಹೇಳಿದ್ದಾರೆ.

ಇನ್ನು ನವದೆಹಲಿಯಲ್ಲಿರುವ ಕ್ಯಾಥೋಲಿಕ್‌ ಬಿಷಪ್ಸ್‌ ಕಾನ್ಫ್ರೆನ್ಸ್‌ ಆಫ್‌ ಇಂಡಿಯಾದ ವತಿಯಿಂದ ಮಂಗಳವಾರ(ಡಿ.24) ಆಯೋಜಿಸಿದ್ದ ಕ್ರಿಸ್‌ಮಸ್‌ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಯೇಸು ಅವರ ಆಶಯಯದಂತೆ, ಸಹೋದರತೆ, ಸಮಾನತೆ, ಪ್ರೀತಿ ಹಾಗೂ ಭ್ರಾತೃತ್ವದಿಂದ ನಾವು ಬಾಳಬೇಕು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

10 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

11 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

15 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

17 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

18 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

19 hours ago