ನವದೆಹಲಿ: ದೇಶದಾದ್ಯಂತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಆಚರಣೆ ಜೋರಾಗಿದ್ದು, ಕ್ರೈಸ್ತ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್ಮಸ್ ಶುಭಾಶಯವನ್ನು ಕೋರಿದ್ದಾರೆ.
ಭಾರತದಾದ್ಯಂತ ಕ್ರೈಸ್ತ ಬಾಂಧವರು ಇಂದು(ಡಿಸೆಂಬರ್.25) ಕ್ರಿಸ್ಮಸ್ ಸಂಭ್ರಮದಲ್ಲಿ ಭಾಗಿಯಾಗಿದ್ದು, ತಂಡೋಪತಂಡವಾಗಿ ಚರ್ಚ್ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯ ಮೂಲಕ ಶುಭಾಶಯ ಕೋರಿರುವ ಮೋದೊ ಅವರು, ಭಗವಾನ್ ಜೀಸಸ್ ಅವರು ಹಾಕಿಕೊಟ್ ಮಾರ್ಗಗಳಲ್ಲಿ ನಾವು ಸಾಗಬೇಕಿದೆ. ಆ ಮುಖಾಂತರ ಶಾಂತಿ, ಸಹಬಾಳ್ವೆ ಹಾಗೂ ಸಮೃದ್ಧಿಯನ್ನು ಸಾಧಿಸಬೇಕಿದೆ ಎಂದು ಹೇಳಿದ್ದಾರೆ.
ಇನ್ನು ನವದೆಹಲಿಯಲ್ಲಿರುವ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫ್ರೆನ್ಸ್ ಆಫ್ ಇಂಡಿಯಾದ ವತಿಯಿಂದ ಮಂಗಳವಾರ(ಡಿ.24) ಆಯೋಜಿಸಿದ್ದ ಕ್ರಿಸ್ಮಸ್ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಯೇಸು ಅವರ ಆಶಯಯದಂತೆ, ಸಹೋದರತೆ, ಸಮಾನತೆ, ಪ್ರೀತಿ ಹಾಗೂ ಭ್ರಾತೃತ್ವದಿಂದ ನಾವು ಬಾಳಬೇಕು ಎಂದು ತಿಳಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…