ಹೊಸದಿಲ್ಲಿ : ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯುವ ಯತ್ನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ವಿಚಾರಣೆಗಾಗಿ ಅಟಾರ್ನಿ ಜನರಲ್ ಅವರಿಗೆ ಪತ್ರ ಬರೆದಿದ್ದಾರೆ.
ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ವಕೀಲ ಸುಭಾಷ್ ಚಂದ್ರನ್ ಕೆ.ಆರ್. ಅವರು ನ್ಯಾಯಾಂಗ ನಿಂದನೆ ಕಾಯ್ದೆ, ೧೯೭೧ರ ೧೫ನೇ ಸೆಕ್ಷನ್ ಅಡಿಯಲ್ಲಿ ಅನುಮತಿ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಭಾರತದ ಸಂವಿಧಾನವನ್ನು ಸೋಲಿಸುವ, ಸುಪ್ರೀಂ ಕೋರ್ಟ್ನ ಅಧಿಕಾರ ಮತ್ತು ಘನತೆಯನ್ನು ಮುಕ್ಕಾಗಿಸುವ ಅತ್ಯಂತ ಹೀನ ಕೃತ್ಯವಿದು ಎಂದು ಸುಭಾಷ್ ಚಂದ್ರನ್ ಅವರು ಅಟಾರ್ನಿ ಜನರಲ್ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ನ್ಯಾಯಾಂಗ ನಿಂದನೆಯಾಗಿರುವ ಬಗ್ಗೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ಗೆ ಖುದ್ದಾಗಿ ತಿಳಿದಿದ್ದರೆ, ಇಂಥ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಈ ನ್ಯಾಯಾಲಯಗಳು ಆರಂಭಿಸಬಹುದಾಗಿದೆ ಎಂದು ಕಾಯ್ದೆಯಲ್ಲಿ ಹೇಳಲಾಗಿದೆ. ಯಾರು ಬೇಕಾದರು ವ್ಯಕ್ತಿಯೊಬ್ಬರ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಬಹುದು. ಆದರೆ, ಇದಕ್ಕೆ ಹೈಕೋರ್ಟ್ನಲ್ಲಿ ಅಡ್ವೊಕೇಟ್ ಜನರಲ್ ಒಪ್ಪಿಗೆ ನೀಡಬೇಕು. ಸುಪ್ರೀಂ ಕೋರ್ಟ್ನ ಸಂದರ್ಭದಲ್ಲಿ ಅಟಾರ್ನಿ ಜನರಲ್ ಅಥವಾ ಸಾಲಿಸಿಟರಲ್ ಜನರಲ್ ಒಪ್ಪಿಗೆ ನೀಡಬೇಕಾಗುತ್ತದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…