ಹೊಸದಿಲ್ಲಿ : ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದೆ. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ಕರೆಗೆ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಯುವಕರು ಮತ್ತು ಪೋಷಕರು ಸೇರಿದಂತೆ ನೂರಾರು ಮಂದಿ ಬೆಂಬಲ ವ್ಯಕ್ತಪಡಿಸಿದ್ದು, ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿಗಿಳಿದಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಸಂಘಟನೆಯ ಬೆಂಬಲಿಗರು ಜಿರಳೆ ಮುಖವಾಡಗಳನ್ನು ಧರಿಸಿ, ಕೈಯಲ್ಲಿ ಹೂವುಗಳು, ಪುಸ್ತಕಗಳು ಹಾಗೂ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಹಲವಾರು ಶಾಲಾ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಆಗಮಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಸಂಘಟನೆಯ ಸಂಸ್ಥಾಪಕ ಅಭಿಜೀತ್ ದಿಪ್ಕೆ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸುವಂತೆ ಕರೆ ನೀಡಿದ್ದು, ಪೊಲೀಸರಿಗೆ ಹೂವುಗಳನ್ನು ನೀಡಿ ಗೌರವ ಸೂಚಿಸಬೇಕು ಹಾಗೂ ಪ್ರೀತಿ ಮತ್ತು ಶಾಂತಿಯ ಮಾರ್ಗದಲ್ಲಿ ಹೋರಾಟ ನಡೆಸಬೇಕು ಎಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದರು.
ಮೊದಲು ಸಂಸತ್ ಮಾರ್ಗ ಪೊಲೀಸ್ ಠಾಣೆಯ ಮುಂದೆ ಸೇರಲು ಬೆಂಬಲಿಗರಿಗೆ ಸೂಚಿಸಲಾಗಿತ್ತು. ಆದರೆ, ನಂತರ ದೆಹಲಿ ಪೊಲೀಸರು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ನೇರವಾಗಿ ಅಲ್ಲಿಗೆ ತೆರಳಿದರು.
ಪ್ರತಿಭಟನೆ ವೇಳೆ “ಕಾಕ್ರೋಚ್ಗಳು ಬರುತ್ತಿವೆ, ಧರ್ಮೇಂದ್ರ ಪ್ರಧಾನ ಹೊರಟು ಹೋಗುತ್ತಿದ್ದಾರೆ” ಎಂಬ ಘೋಷಣೆಗಳನ್ನು ಕೂಗಲಾಗಿದ್ದು, NEET, CBSE, CUET ಹಾಗೂ SSC ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…