ದೇಶ- ವಿದೇಶ

ಮನಮೋಹನ್‌ ಸಿಂಗ್‌ ಆಡಳಿತದ ಅವಧಿಯಲ್ಲಿ ತಮಿಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ: ಎಂ.ಕೆ.ಸ್ಟಾಲಿನ್‌

ಚನ್ನೈ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಆಡಳಿತದ ಅವಧಿಯಲ್ಲಿ ತಮಿಳು ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನವನ್ನು ನೀಡಿದರು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಹೇಳಿದ್ದಾರೆ.

ಚೆನ್ನೈನಲ್ಲಿ ತಮಿಳುನಾಡು ಕಾಂಗ್ರೆಸ್‌ ಸಮಿತಿ ಆಯೋಜಿಸಿದ್ದ ಸ್ಮರಣಾರ್ಥ ಸಭೆಯಲ್ಲಿ ಮನಮೋಹನ್‌ ಸಿಂಗ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಮನಮೋಹನ್‌ ಸಿಂಗ್‌ ಅವರು ಜನರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿ ಮಾಡಿದರು. ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಹಣಕಾಸು ಸಚಿವರಾಗಿ ಅವರು ರೂಪಿಸಿದ ಆರ್ಥಿಕ ನೀತಿಗಳು ದೇಶದ ಬೆಳವಣಿಗೆಗೆ ಆಧಾರವಾಗಿವೆ ಎಂದು ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಈರೋಡ್‌ ವೆಂಕಟ ಕೃಷ್ಣಸ್ವಾಮಿ ಸಂಪತ್‌ ಇಳಂಗೋವನ್‌ ಅವರನ್ನು ಸ್ಮರಿಸಿದ ಸ್ಟಾಲಿನ್‌, ಇಬ್ಬರು ಪ್ರಮುಖ ನಾಯಕರನ್ನು ಕಳೆದುಕೊಂಡು ದೇಶಕ್ಕೆ ಅಪಾರ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

2 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

2 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

2 hours ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

2 hours ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

2 hours ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

2 hours ago