ಶಿಮ್ಲಾ: ದೇಶದ್ಯಾಂತ ಭಾರಿ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶದಲ್ಲೂ ಕೂಡ ಮಳೆಯ ಅಬ್ಬರ ಮುಂದುವರೆದಿದೆ. ಇಲ್ಲಿನ ಶಿಮ್ಲಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ಪರಿಣಾಮ 30ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ಶಿಮ್ಲಾದಿಂದ 100ಕಿ.ಮೀ ದೂರದಲ್ಲಿರುವ ರಾಂಪುರದ ಝಖಾರಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.
ಸದ್ಯ ಸ್ಥಳಕ್ಕೆ ಆಗಮಿಸಿರು ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಇಲ್ಲಿ ಒಟ್ಟು 30ಮಂದಿ ನಾಪತ್ತೆಯಾಗಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಎನ್ಡಿಆರ್ಎಫ್, ರಕ್ಷಣಾ ತಂಡ ಹಾಗೂ ಪೊಲೀಸರನ್ನು ಕಳುಹಿಸಿದ್ದೇವೆ, ಹಲವೆಡೆ ರಸ್ತೆಗಳು ಕೊಚ್ಚಿಹೋಗಿದ್ದು, ಜಲವಿದ್ಯುತ್ ಸ್ಥಾವರಕ್ಕೂ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ತಂಡ, ಇಂಡೋ-ಟಿಬೆಟಿನ್ ಗಡಿ ಪೊಲೀಸ್ ಹಾಗೂ ಗೃಹ ರಕ್ಷಕ ದಳ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿವೆ.
ಕಾಣೆಯಾದ ಜನರ ಪತ್ತೆಗೆ ಡ್ರೋನ್ಗಳನ್ನು ಬಳಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು : ಮಡಿಕೇರಿಯಲ್ಲಿ ನಡೆದಿದೆ ಎನ್ನಲಾದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ…
ಎಚ್.ಡಿ.ಕೋಟೆ : ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಓರ್ವ ಅರಣ್ಯ ರಕ್ಷಕ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ನಾಗರಹೊಳೆಯ…
ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್ಆರ್ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ…
ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ…
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ…
50ಕ್ಕೂ ಹೆಚ್ಚು ಸ್ಟಿಂಗ್ ಆಪರೇಷನ್ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…