ದೇಶ- ವಿದೇಶ

ಶಿಮ್ಲಾದಲ್ಲಿ ಮೇಘಸ್ಪೋಟ: 30ಕ್ಕೂ ಅಧಿಕ ಮಂದಿ ನಾಪತ್ತೆ

ಶಿಮ್ಲಾ: ದೇಶದ್ಯಾಂತ ಭಾರಿ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶದಲ್ಲೂ ಕೂಡ ಮಳೆಯ ಅಬ್ಬರ ಮುಂದುವರೆದಿದೆ. ಇಲ್ಲಿನ ಶಿಮ್ಲಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ಪರಿಣಾಮ 30ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ಶಿಮ್ಲಾದಿಂದ 100ಕಿ.ಮೀ ದೂರದಲ್ಲಿರುವ ರಾಂಪುರದ ಝಖಾರಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.

ಸದ್ಯ ಸ್ಥಳಕ್ಕೆ ಆಗಮಿಸಿರು ಜಿಲ್ಲಾಧಿಕಾರಿ ಅನುಪಮ್‌ ಕಶ್ಯಪ್‌ ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಇಲ್ಲಿ ಒಟ್ಟು 30ಮಂದಿ ನಾಪತ್ತೆಯಾಗಿದೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಎನ್‌ಡಿಆರ್‌ಎಫ್‌, ರಕ್ಷಣಾ ತಂಡ ಹಾಗೂ ಪೊಲೀಸರನ್ನು ಕಳುಹಿಸಿದ್ದೇವೆ, ಹಲವೆಡೆ ರಸ್ತೆಗಳು ಕೊಚ್ಚಿಹೋಗಿದ್ದು, ಜಲವಿದ್ಯುತ್‌ ಸ್ಥಾವರಕ್ಕೂ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್‌ ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ತಂಡ, ಇಂಡೋ-ಟಿಬೆಟಿನ್‌ ಗಡಿ ಪೊಲೀಸ್ ಹಾಗೂ ಗೃಹ ರಕ್ಷಕ ದಳ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿವೆ.

ಕಾಣೆಯಾದ ಜನರ ಪತ್ತೆಗೆ ಡ್ರೋನ್‌ಗಳನ್ನು ಬಳಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಗೃಹ ಸಚಿವ ಪರಮೇಶ್ವರ್‌ ಹೇಳಿದಿಷ್ಟು

ಬೆಂಗಳೂರು : ಮಡಿಕೇರಿಯಲ್ಲಿ ನಡೆದಿದೆ ಎನ್ನಲಾದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ…

30 mins ago

ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಅರಣ್ಯ ರಕ್ಷಕ ಸಾವು

ಎಚ್‌.ಡಿ.ಕೋಟೆ : ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಓರ್ವ ಅರಣ್ಯ ರಕ್ಷಕ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ನಾಗರಹೊಳೆಯ…

43 mins ago

ಓದುಗರ ಪತ್ರ | ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್‌ಆರ್‌ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ…

1 hour ago

ಓದುಗರ ಪತ್ರ | ಜೀವಾವಧಿ ಶಿಕ್ಷೆ ಎಂದರೆ …

ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ…

1 hour ago

ಓದುಗರ ಪತ್ರ | ಬೇಸಿಗೆಯಲ್ಲಿ ವಿದ್ಯುತ್ ದರ ಏರಿಕೆಯ ಬರೆ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ | ಹೆಣ್ಣು ಭ್ರೂಣ ಹಂತಕ ವೈದ್ಯರನ್ನು ಬೇಟೆಯಾಡುವ ವರ್ಷಾ ದೇಶಪಾಂಡೆ

50ಕ್ಕೂ ಹೆಚ್ಚು ಸ್ಟಿಂಗ್‌ ಆಪರೇಷನ್‌ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…

2 hours ago