ಉತ್ತರಾಖಂಡ್: ಉತ್ತರಾಖಂಡ್ನಲ್ಲಿ ಭಾರೀ ಮಳೆಯಾಗುತ್ತಿದ್ದು, ಮೇಘಸ್ಫೋಟದಿಂದ 5 ಮಂದಿ ಸಾವನ್ನಪ್ಪಿದ್ದು, ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ.
ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿದೆ. ಪರಿಣಾಮ ಹಲವು ಮನೆಗಳಿಗೆ ಹಾನಿಯಾಗಿದ್ದು, ಹಲವರು ಅವಶೇಷಗಳಡಿ ಸಮಾಧಿಯಾಗಿದ್ದಾರೆ.
ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ಬಾಗೇಶ್ವರ ಜಿಲ್ಲೆಯ ಕಪ್ಕೋಟ್ ಪ್ರದೇಶದ ಪೌಸಾರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರು ಮನೆಗಳು ಹಾನಿಗೊಳಗಾಗಿವೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಕಾಣೆಯಾಗಿದ್ದಾರೆ.
ಇನ್ನು ಚಲೋಲಿ ಜಿಲ್ಲೆಯ ಮೊಪಟಾ ಗ್ರಾಮದಲ್ಲಿ ಭೂಕುಸಿತದಿಂದ ಒಂದು ಮನೆ ಹಾಗೂ ದನದ ಕೊಟ್ಟಿಗೆ ಕುಸಿದು ಹೋಗಿದ್ದು, ಇದರಲ್ಲಿ ದಂಪತಿ ಸಾವನ್ನಪ್ಪಿದ್ದಾರೆ.
ದುದ್ರಪ್ರಯಾಗ ಜಿಲ್ಲೆಯ ಬಸುಕೆದಾರ್ ಪ್ರದೇಶದಲ್ಲಿ ನಿರಂತರ ಮಳೆ ಮತ್ತು ಭೂಕುಸಿತಗಳು ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಯಾತ್ರಿಕರು ರಸ್ತೆಯ ಬಗ್ಗೆ ಮಾಹಿತಿ ಪಡೆದ ಬಳಿಕ ಮಾತ್ರ ಪ್ರಯಾಣ ಆರಂಭಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಜಿಬಿಎ ಚುನಾವಣೆಗೆ…