Cloudburst in Uttarakhand 9 workers missing in floods
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮೇಘಸ್ಪೋಟಗೊಂಡು ಪ್ರವಾಹ ಉಂಟಾದ ಪರಿಣಾಮ ನಿರ್ಮಾಣ ಹಂತದ ಹೋಟೆಲ್ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ.
ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದ್ದು, ಕಾರ್ಮಿಕರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಮೇಘಸ್ಫೋಟದ ಪರಿಣಾಮ ಚಾರ್ಧಾಮ್ ಯಾತ್ರೆ ಸ್ಥಗಿತಗೊಳಿಸಲಾಗಿದ್ದು, ಗಂಗೋತ್ರಿ, ಯಮುನೋತ್ರಿ, ಕೇದಾರನಾಥ, ಭದ್ರಿನಾಥ ಯಾತ್ರೆ ಕೂಡ ಸ್ಥಗಿತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಯಮುನಾ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಹಲವು ರಸ್ತೆಗಳು ಬಂದ್ ಆಗಿವೆ.
ರುದ್ರಪ್ರಯಾಗ್ ಜಿಲ್ಲೆಯ ಸೋನ್ ಪ್ರಯಾಗ್-ಮುಂಕಟಿಯಾ ರಸ್ತೆ ಬಂದ್ ಆಗಿದ್ದು, ಕೇದಾರನಾಥಕ್ಕೆ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ಮಾರ್ಗ ಬಂದ್ ಮಾಡಲಾಗಿದೆ.
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…