ನವದೆಹಲಿ: ದೆಹಲಿ ಮಧ್ಯನೀತಿ ಹಗರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್.23ರವರೆಗೆ ವಿಸ್ತರಿಸಿದೆ.
ಸೋಮವಾರ ಅರವಿಂದ್ ಕೇಜ್ರಿವಾಲ್ ಆಘಾತದ ಮೇಲೆ ಆಘಾತ ಎದುರಿಸಿದರು. ಮೊದಲು ಸುಪ್ರೀಂಕೋರ್ಟ್ ಕೇಜ್ರಿವಾಲ್ ಗೆ ರಿಲಿಫ್ ನೀಡಲು ನಿರಾಕರಿಸಿ ಏಪ್ರಿಲ್ 29ಕ್ಕೆ ಮುಂದೂಡಿತು. ನಂತರ ಅರ್ಧ ಗಂಟೆ ಬಳಿಕ ದೆಹಲಿ ಕೋರ್ಟ್ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿತು.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು ತಿಹಾರ್ ಜೈಲಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ಮಾತನಾಡಿ ಭಾವುಕರಾದರು. ಅವರ ಕಣ್ಣುಂಚಿನಲ್ಲಿ ನೀರು ತುಂಬಿ ಬಂದವು.
ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಇದೆ ಎನ್ನುವುದಕ್ಕೆ, ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಲಾಭಕ್ಕೋಸ್ಕರ ಬಂಧಿಸಲಾಗಿದೆ ಎನ್ನುವ ಕೇಜ್ರಿವಾಲ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕೋರ್ಟ್ ಅರ್ಜಿದಾರರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಚುನಾವಣಾ ಕಾಲವೋ ಇಲ್ಲವೋ ಆದರೆ, ಕಾನೂನು ಪ್ರಕಾರ ಅವರ ಬಂಧನ ಆಗಿದೆ ಎನ್ನುವುದನ್ನು ಮಾತ್ರ ಕೋರ್ಟ್ ಪರಿಗಣಿಸುತ್ತದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…