ನವದೆಹಲಿ: ದೆಹಲಿಯ ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ ಡೆಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಜೂನ್.2) ಮತ್ತೆ ಜೈಲಿಗೆ ಶರಣಾಗಿದ್ದಾರೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಅವರ ಜಾಮೀನು ಅವಧಿ ಜೂನ್.1ಕ್ಕೆ ಮುಕ್ತಾಯವಾದ ಹಿನ್ನಲೆ ಇಂದು (ಭಾನುವಾರ) ತಿಹಾರ್ ಜೈಲಿಗೆ ತೆರಳಿ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.
ಇನ್ನು ಅವರು ಇಂದು ತಿಹಾರ್ ಜೈಲಿಗೆ ತೆರಳುವ ಮುನ್ನಾ ಎಎಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ನಾನು ಭ್ರಷ್ಟಾಚಾರಕ್ಕಾಗಿ ಜೈಲಿಗೆ ಹೋಗುತ್ತಿಲ್ಲ. ಬದಲಾಗಿ ಸರ್ವಾಧಿಕಾರತ್ವದ ವಿರುದ್ಧ ಧನಿ ಎತ್ತಿದ್ದಕ್ಕಾಗಿ ಜೈಲಿಗೆ ಹೋಗುತ್ತಿದ್ದೇನೆ. ಸುಪ್ರೀಂ ಕೋರ್ಟ್ ನನಗೆ 21 ದಿನಗಳ ಗಡುವು ನೀಡಿತ್ತು. ನಾನು ಇದರಲ್ಲಿ ಒಂದು ದಿನವನ್ನು ವ್ಯರ್ಥ ಮಾಡಿಲ್ಲ. ದೇಶದ ಉಳಿವಿಗಾಗಿ ಪ್ರಚಾರ ಮಾಡಿದ್ದೇನೆ.
ನನಗೆ ಪಕ್ಷಕ್ಕಿಂತ ದೇಶ ಮುಖ್ಯ ಎಂದು ಹೇಳಿದ ಅವರು, ಎಕ್ಸಿಟ್ ಪೋಲ್ಸ್ಗಳ ಸಮೀಕ್ಷೆಗಳೆಲ್ಲಾ ನಕಲಿ ಎಂದು ವ್ಯಂಗ್ಯವಾಡಿದರು.
ರಾಜ್ಘಟ್ನ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದ ಬಳಿಕ ಕನ್ನಾಟ್ನ ಹನುಮಾನ್ ದೇವಾಲಯಕ್ಕೆ ಪೂಜೆ ಸಲ್ಲಿಸಿದ ಸಿಎಂ ಕೇಜ್ರಿವಾಲ್ ಅಲ್ಲಿಂದ ತಿಹಾರ್ ಜೈಲಿಗೆ ಹೋಗಿ ಅಧಿಕಾರಿಗಳ ಮುಂದೆ ಶರಣಾದರು.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…