ನವದೆಹಲಿ: ದೆಹಲಿ ಸಿಎಂ ಆಗಿ ಎಎಪಿ ಪಕ್ಷದ ನಾಯಕಿ ಅತಿಶಿ ಮರ್ಲೇನಾ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಕಚೇರಿಯಲ್ಲಿ ಸಿಎಂ ಕುರ್ಚಿಯಲ್ಲಿ ಕೂರದೇ ಬೇರೊಂದು ಕುರ್ಚಿಯನ್ನು ತರಿಸಿಕೊಂಡು ಅಧಿಕಾರ ಸ್ವೀಕರಿಸುವ ಮೂಲಕ ತಮ್ಮ ಗುರು ಕೇಜ್ರಿವಾಲ್ಗೆ ಗೌರವ ತೋರಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಹಿಂದೂ ಕಾವ್ಯ ರಾಮಾಯಣದಲ್ಲಿ ಬರುವಂತೆ ಶ್ರೀರಾಮನು ವನವಾಸಕ್ಕೆ ಹೋದಾಗ ಅವರ ಅನುಪಸ್ಥಿತಿಯಲ್ಲಿ ಸಿಂಹಾಸನದಲ್ಲಿ ರಾಮನ ಪಾದುಕೆಯಿಟ್ಟು ಆಳ್ವಿಕೆ ಮಾಡಿದಂತೆಯೇ, ನಾನು ದೆಹಲಿ ಸಿಎಂ ಆಗಿ ಆಳ್ವಿಕೆ ಮಾಡುತ್ತೇನೆ. ಅಂದಿನ ಕಾಲದಲ್ಲಿ ಭರತ ಆಡಳಿತ ನಡೆಸಿದರೆ, ಇಂದಿನ ಭಾರತದಲ್ಲಿ ನಾನು ಮುಂಬರುವ ಚುನಾವಣೆಯವರೆಗೂ ಅಂದರೆ 4 ತಿಂಗಳವರೆಗೆ ಸರ್ಕಾರವನ್ನು ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ದೆಹಲಿ ಕುರ್ಚಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸೇರಿದ್ದು, ದೆಹಲಿಯಲ್ಲಿ ಮುಂಬರುವ ಚುನಾವಣೆಯಲ್ಲಿ ಕೇಜ್ರಿವಾಲ್ ಅವರನ್ನು ಸಾರ್ವಜನಿಕರು ಮತ್ತೊಮ್ಮೆ ಚುನಾಯಿಸಿ ಜನಪ್ರತಿನಿಧಿಯಾಗಿ ಆಯ್ಕೆ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…