ನವದೆಹಲಿ: ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಶನಿವಾರ(ಜ.18) ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಬೆಂಬಲಿಗರು ದಾಳಿ ನಡೆಸಿದ್ದಾರೆ. ಈ ಕಾರಣಕ್ಕೆ ಕೇಜ್ರಿವಾಲ್ ಅವರ ಹತ್ಯೆಗೆ ಬಿಜೆಪಿಗೆ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಪಕ್ಷದ ವಿರುದ್ಧ ದೆಹಲಿ ಸಿಎಂ ಅತಿಶಿ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಇಂದು(ಜನವರಿ.19) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕೇಜ್ರಿವಾಲ್ ಅವರನ್ನು ಹತ್ಯೆ ಮಾಡಲೆಂದು ಗೂಂಡಾಗಳನ್ನು ಕಳುಹಿಸಿರುವುದು ಸ್ಪಷ್ಟವಾಗಿ ತಿಳಿಯುತ್ತಿದೆ. ಕೇಜ್ರಿವಾಲ್ ಅವರ ಕಾರಿನ ಮೇಲೆ ನಡೆದ ದಾಳಿಯಲ್ಲಿ ತೊಡಗಿದ್ದ ರೋಹಿತ್ ತ್ಯಾಗಿ ಎಂಬಾತ ಬಿಜೆಪಿಯೂ ಅಭ್ಯರ್ಥಿ ಪರ್ವೇಶ್ ವರ್ಮಾ ಅವರೊಂದಿಗೆ ಇರುತ್ತಿದ್ದ ಎಂದು ವಾಗ್ದಾಳಿ ನಡೆಸಿದರು.
ಪರ್ವೇಶ್ ವರ್ಮಾ ಅವರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕೇಜ್ರಿವಾಲ್ ವಿರುದ್ಧ ದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಇನ್ನೂ ಈತ ಒಬ್ಬ ಕ್ರಿಮಿನಲ್ ಆಗಿದ್ದು, 2011ರಲ್ಲಿ ಕಳ್ಳತನ ಹಾಗೂ ಹತ್ಯೆ ಪ್ರಯತ್ನದ ಆರೋಪಗಳಿವೆ. ಆದಾಗ್ಯೂ ಕೇಜ್ರಿವಾಲ್ ವಿರುದ್ಧ ದಾಳಿ ಮಾಡಿದ್ದ ವೇಳೆ ಮೂವರು ಸ್ಥಳೀಯರು ಗಾಯಗೊಂಡಿದ್ದಾರೆ. ಅಲ್ಲದೇ ದಾಳಿ ನಡೆದ ಸ್ಥಳದಲ್ಲಿದ್ದ ವ್ಯಕ್ತಿ ಸುಮಿತ್ ಎಂಬಾತನ ಮೇಲೂ ಕಳ್ಳತನದ ಆರೋಪವಿದೆ. ಹೀಗಾಗಿ ಈ ಎಲ್ಲಾ ಘಟನೆಗಳನ್ನು ಹೋಲಿಕೆ ಮಾಡಿ ನೋಡಿದರೆ ಬಿಜೆಪಿಯ ಗೂಂಡಾಗಳು ಕೇಜ್ರಿವಾಲ್ ವಿರುದ್ಧ ದಾಳಿ ನಡೆಸಿ, ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಕಿಡಿಕಾರಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…