ದೇಶ- ವಿದೇಶ

ಸಿ.ಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ : 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ಹೊಸದಿಲ್ಲಿ : ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ.

ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ, ಇಂಧನ ಸಚಿವ ಕೆ.ಜೆ ಜಾರ್ಜ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಇದ್ದರು.

ಕೇಂದ್ರ ಸರಕಾರವು 2018ರಲ್ಲಿ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದರೆ, ಇದು ಮೇಕ್‌ ಇನ್‌ ಇಂಡಿಯಾ ಉಪಕ್ರಮಕ್ಕೂ ಬಲ ತುಂಬುತ್ತದೆ ಎಂದು ಸಿದ್ದರಾಮಯ್ಯ ಮನದಟ್ಟು ಮಾಡಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಪಾಟೀಲ ಅವರು ಕೂಡ ಪೂರಕ ಮಾಹಿತಿ ಒದಗಿಸಿದರು.

ಉತ್ತರ ಕರ್ನಾಟಕದ ಮೇಲ್ಕಂಡ ಮೂರು ಜಿಲ್ಲೆಗಳಲ್ಲಿ ರಕ್ಷಣಾ ವಲಯದ ಉತ್ಪಾದನಾ ಕಂಪನಿಗಳಾದ ಬಾಲೂ ಫೋರ್ಜ್‌, ಏಕಸ್‌, ಬಿಕಾರ್‌ ಏರೋಸ್ಪೇಸ್‌, ವಾಲ್‌ಚಂದ್‌ ನಗರ್‌ ಇಂಡಸ್ಟ್ರೀಸ್‌ ಮುಂತಾದವು ನೆಲೆಯೂರಿವೆ. ಜತೆಗೆ ಬೆಳಗಾವಿಯಲ್ಲಿ 250 ಎಕರೆಯಲ್ಲಿ ದೇಶದ ಪ್ರಪ್ರಥಮ ಪ್ರಿಸಿಶನ್‌ ಉತ್ಪಾದನೆಯ ವಿಶೇಷ ಆರ್ಥಿಕ ವಲಯವು ಸಕ್ರಿಯವಾಗಿದೆ. ಇಲ್ಲಿ 31 ಘಟಕಗಳಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ಈ ಸಂದರ್ಭದಲ್ಲಿ ಗಮನಕ್ಕೆ ತರಲಾಗಿದೆ.

ದಕ್ಷಿಣ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ರಕ್ಷಣಾ ಸಾಮಗ್ರಿ ಮತ್ತು ವೈಮಾಂತರಿಕ್ಷ ಕಂಪನಿಗಳಾದ ಸಾರ್ವಜನಿಕ ವಲಯದ ಎಚ್‌ಎಎಲ್‌, ಕಾಲಿನ್ಸ್‌ ಏರೋಸ್ಪೇಸ್‌, ಡೈನಮ್ಯಾಟಿಕ್‌ ಟೆಕ್ನಾಲಜೀಸ್‌, ಸೆಂಟಮ್, ಸಾಸ್ಮೋಸ್‌, ಬೆಲ್ಲಾಟ್ರಿಕ್ಸ್‌ ಮುಂತಾದವು ಇವೆ. ಇವುಗಳೊಂದಿಗೆ ಟಿಎಎಸ್‌ಎಲ್‌ ತನ್ನ ಅಂತಿಮ ಜೋಡಣಾ ಘಟಕವನ್ನು ಆರಂಭಿಸುತ್ತಿದೆ. ಏರ್‌ ಇಂಡಿಯಾ ಮತ್ತು ಇಂಡಿಗೋ ಸಾವಿರಾರು ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತಮ್ಮ ಎಂಆರ್‌ಒ ಘಟಕಗಳನ್ನು ಬೆಂಗಳೂರಿನ ಸಮೀಪದಲ್ಲಿ ಸ್ಥಾಪಿಸುತ್ತಿವೆ. ದೇವನಹಳ್ಳಿಯಲ್ಲಿ 2 ಸಾವಿರ ಎಕರೆ ವಿಸ್ತಾರದ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಇದೆ. ಈ ಭಾಗದಲ್ಲಿ ದೇಶದ ಏರ್‌ಕ್ರಾಫ್ಟ್‌ ಮತ್ತು ಸ್ಪೇಸ್‌ಕ್ರಾಫ್ಟ್‌ ವಲಯದ ಶೇಕಡ 25ರಷ್ಟು ತಯಾರಿಕೆ ನಡೆಯುತ್ತಿದೆ. ವಿಮಾನ ಮತ್ತು ಹೆಲಿಕಾಪ್ಟರ್‌ ತಯಾರಿಕೆಯಲ್ಲಿ ರಾಜ್ಯದ ಕೊಡುಗೆ ಶೇ.67ರಷ್ಟಿದೆ. ಇವೆಲ್ಲವನ್ನೂ ಪರಿಗಣಿಸಿ, ಎರಡು ಡಿಫೆನ್ಸ್‌ ಕಾರಿಡಾರ್‌ಗಳನ್ನು ಮಂಜೂರು ಮಾಡಬೇಕೆಂದು ನಿಯೋಗವು ಒತ್ತಾಯಿಸಿದೆ.

ಮನವಿ ಸ್ವೀಕರಿಸಿದ ರಾಜನಾಥ್‌ ಸಿಂಗ್‌, ಇವುಗಳನ್ನು ಸೂಕ್ತವಾಗಿ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago