ದೇಶ- ವಿದೇಶ

ಸಿ.ಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ : 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ಹೊಸದಿಲ್ಲಿ : ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ.

ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ, ಇಂಧನ ಸಚಿವ ಕೆ.ಜೆ ಜಾರ್ಜ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಇದ್ದರು.

ಕೇಂದ್ರ ಸರಕಾರವು 2018ರಲ್ಲಿ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದರೆ, ಇದು ಮೇಕ್‌ ಇನ್‌ ಇಂಡಿಯಾ ಉಪಕ್ರಮಕ್ಕೂ ಬಲ ತುಂಬುತ್ತದೆ ಎಂದು ಸಿದ್ದರಾಮಯ್ಯ ಮನದಟ್ಟು ಮಾಡಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಪಾಟೀಲ ಅವರು ಕೂಡ ಪೂರಕ ಮಾಹಿತಿ ಒದಗಿಸಿದರು.

ಉತ್ತರ ಕರ್ನಾಟಕದ ಮೇಲ್ಕಂಡ ಮೂರು ಜಿಲ್ಲೆಗಳಲ್ಲಿ ರಕ್ಷಣಾ ವಲಯದ ಉತ್ಪಾದನಾ ಕಂಪನಿಗಳಾದ ಬಾಲೂ ಫೋರ್ಜ್‌, ಏಕಸ್‌, ಬಿಕಾರ್‌ ಏರೋಸ್ಪೇಸ್‌, ವಾಲ್‌ಚಂದ್‌ ನಗರ್‌ ಇಂಡಸ್ಟ್ರೀಸ್‌ ಮುಂತಾದವು ನೆಲೆಯೂರಿವೆ. ಜತೆಗೆ ಬೆಳಗಾವಿಯಲ್ಲಿ 250 ಎಕರೆಯಲ್ಲಿ ದೇಶದ ಪ್ರಪ್ರಥಮ ಪ್ರಿಸಿಶನ್‌ ಉತ್ಪಾದನೆಯ ವಿಶೇಷ ಆರ್ಥಿಕ ವಲಯವು ಸಕ್ರಿಯವಾಗಿದೆ. ಇಲ್ಲಿ 31 ಘಟಕಗಳಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ಈ ಸಂದರ್ಭದಲ್ಲಿ ಗಮನಕ್ಕೆ ತರಲಾಗಿದೆ.

ದಕ್ಷಿಣ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ರಕ್ಷಣಾ ಸಾಮಗ್ರಿ ಮತ್ತು ವೈಮಾಂತರಿಕ್ಷ ಕಂಪನಿಗಳಾದ ಸಾರ್ವಜನಿಕ ವಲಯದ ಎಚ್‌ಎಎಲ್‌, ಕಾಲಿನ್ಸ್‌ ಏರೋಸ್ಪೇಸ್‌, ಡೈನಮ್ಯಾಟಿಕ್‌ ಟೆಕ್ನಾಲಜೀಸ್‌, ಸೆಂಟಮ್, ಸಾಸ್ಮೋಸ್‌, ಬೆಲ್ಲಾಟ್ರಿಕ್ಸ್‌ ಮುಂತಾದವು ಇವೆ. ಇವುಗಳೊಂದಿಗೆ ಟಿಎಎಸ್‌ಎಲ್‌ ತನ್ನ ಅಂತಿಮ ಜೋಡಣಾ ಘಟಕವನ್ನು ಆರಂಭಿಸುತ್ತಿದೆ. ಏರ್‌ ಇಂಡಿಯಾ ಮತ್ತು ಇಂಡಿಗೋ ಸಾವಿರಾರು ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತಮ್ಮ ಎಂಆರ್‌ಒ ಘಟಕಗಳನ್ನು ಬೆಂಗಳೂರಿನ ಸಮೀಪದಲ್ಲಿ ಸ್ಥಾಪಿಸುತ್ತಿವೆ. ದೇವನಹಳ್ಳಿಯಲ್ಲಿ 2 ಸಾವಿರ ಎಕರೆ ವಿಸ್ತಾರದ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಇದೆ. ಈ ಭಾಗದಲ್ಲಿ ದೇಶದ ಏರ್‌ಕ್ರಾಫ್ಟ್‌ ಮತ್ತು ಸ್ಪೇಸ್‌ಕ್ರಾಫ್ಟ್‌ ವಲಯದ ಶೇಕಡ 25ರಷ್ಟು ತಯಾರಿಕೆ ನಡೆಯುತ್ತಿದೆ. ವಿಮಾನ ಮತ್ತು ಹೆಲಿಕಾಪ್ಟರ್‌ ತಯಾರಿಕೆಯಲ್ಲಿ ರಾಜ್ಯದ ಕೊಡುಗೆ ಶೇ.67ರಷ್ಟಿದೆ. ಇವೆಲ್ಲವನ್ನೂ ಪರಿಗಣಿಸಿ, ಎರಡು ಡಿಫೆನ್ಸ್‌ ಕಾರಿಡಾರ್‌ಗಳನ್ನು ಮಂಜೂರು ಮಾಡಬೇಕೆಂದು ನಿಯೋಗವು ಒತ್ತಾಯಿಸಿದೆ.

ಮನವಿ ಸ್ವೀಕರಿಸಿದ ರಾಜನಾಥ್‌ ಸಿಂಗ್‌, ಇವುಗಳನ್ನು ಸೂಕ್ತವಾಗಿ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

9 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

9 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

9 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

9 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

9 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

9 hours ago