ನವದೆಹಲಿ: 18ನೇ ಸಾರ್ವತ್ರಿಕ ಚುನಾವಣಾ ಬಳಿಕ ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಶನಿವಾರ (ಜೂನ್.29) ಭೇಟಿಯಾಗಿ ಶುಭ ಕೋರಿದರು.
ರಾಹುಲ್ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅಂಡ್ ಟೀಂ ಕುಶಲೋಪಾಯ ವಿಚಾರಿಸಿದರು.
ಇನ್ನು ರಾಹುಲ್ ಗಾಂಧಿ ಭೇಟಿಯಾದ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಮೊದಲ ಬಾರಿಗೆ ಆಯ್ಕೆಯಾದ ರಾಹುಲ್ ಗಾಂಧಿ ಅವರನ್ನು ರಾಗಾರ ದೆಹಲಿ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಲು ಸಂತೋಷವಾಗಿದೆ” ಎಂದು ಫೋಟೋ ಒಂದನ್ನು ಹಂಚಿಕೊಂಡು ಬರೆದುಕೊಂಡಿದ್ದಾರೆ.
ಭೇಟಿಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…