ದೇಶ- ವಿದೇಶ

ಸಂಪುಟ ಪುನರ್‌ ರಚನೆ ಉದ್ದೇಶ ಸದ್ಯಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

ನವದೆಹಲಿ: ರಾಜ್ಯಾದ್ಯಾಂತ ಸಚಿವ ಸಂಪುಟ ಪುನರ್‌ ರಚನೆ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನರ್‌ ರಚನೆ ಉದ್ದೇಶ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿಯಲ್ಲಿ ಇಂದು(ನ.29) ರಾಜ್ಯ ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರ್‌ ರಚನೆಯ ಕುರಿತು ನಾನು ಎಂದಿಗೂ ಪ್ರಸ್ತಾಪಿಸಿಲ್ಲ. ಅಲ್ಲದೇ ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌  ನಾಯಕ ರಾಹುಲ್‌ ಗಾಂಧಿಯವರೊಂದಿಗೂ ಸಹ ಚರ್ಚೆ ಮಾಡಿಲ್ಲ ಎಂದಿದ್ದಾರೆ.

ನಾಗೇಂದ್ರ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂಬ ಹೇಳಿಕೆಯನ್ನು ಮಾತ್ರ ಹೇಳಿದ್ದೆ ಅಷ್ಟೇ. ಆದರೆ ಇದೀಗ ಸಚಿವ ಸಂಪುಟದ ಬಗ್ಗೆ ಮಾಧ್ಯಮದವರೇ ಪ್ರಕಟಿಸಿ, ಸಂಭವನೀಯವಾಗಿ ಸಚಿವರ ಪಟ್ಟಿಯನ್ನು ಕೂಡ ಬಿತ್ತರಿಸಿವೆ. ಹೀಗಾಗಿ ಈ ಎಲ್ಲಾ ಪ್ರಶ್ನೆಗಳಿಗೆ ಮಾಧ್ಯಮದವರೇ ಉತ್ತರಿಸಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ, ಹಾಸನದಲ್ಲಿ ಡಿಸೆಂಬರ್‌ 5ರಂದು ಕಾಂಗ್ರೆಸ್‌ ಪಕ್ಷ ಮತ್ತು ಹಿಂದುಳಿದ ವರ್ಗಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದೆ. ಹೀಗಾಗಿ ಸಮಾವೇಶಕ್ಕೆ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್‌  ಸಿಂಗ್‌ ಸುರ್ಜೇವಾಲ ಅವರನ್ನು ಸಂಘಟಕರು ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

 

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

2 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

2 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

2 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

2 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

11 hours ago