ದೇಶ- ವಿದೇಶ

ತೋತಾಪುರಿ ಮಾವು ಖರೀದಿ ನಿಷೇಧ : ಆಂದ್ರ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು : ತೋತಾಪುರಿ ಮಾವು ಬೆಲೆ ಕುಸಿತವಾಗಿರುವ ಹಿನ್ನೆಲೆ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಕರ್ನಾಟಕದ ತೋತಾಪುರಿ ಮಾವು ಖರೀದಿ ನಿಷೇಧಿಸಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲಾಡಳಿತ ಹೊರಡಿಸಿದ್ದ ಆದೇಶ ಕೋಲಾರ ಮತ್ತು ಚಿಕ್ಕಬಳ್ಳಾಪುರದ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಇದರ ಬೆನ್ನಲ್ಲೇ ಮಧ್ಯ ಪ್ರವೇಶ ಮಾಡಿದ್ದ ಕರ್ನಾಟಕ ಸರ್ಕಾರದ ಆಂಧ್ರಪ್ರದೇಶ ರಾಜ್ಯಕ್ಕೆ ಪತ್ರ ಬರೆದಿದ್ದು, ನಿಷೇಧ ಆದೇಶ ಹಿಂಪಡೆಯುವಂತೆ ಮನವಿ ಮಾಡಿದೆ.

ಸಿಎಂ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದು, ಚಿತ್ತೂರು ಜಿಲ್ಲಾಡಳಿತವು ಕರ್ನಾಟಕದ ತೋತಾಪುರಿ ಮಾವು ಖರೀದಿ ಮೇಲೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದು ಸಹಕಾರಿ ಒಕ್ಕೂಟ ವ್ಯವಸ್ಥೆಯ ಮನೋಭಾವಕ್ಕೆ ವಿರುದ್ಧವಾಗಿದೆ. ಇದು ಪ್ರತೀಕಾರದ ಕ್ರಮಗಳಿಗೆ ಕಾರಣವಾಗಬಹುದು ಎಂದು ನಾನು ಕಳವಳ ವ್ಯಕ್ತಪಡಿಸುತ್ತೇನೆ. ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತರ-ರಾಜ್ಯ ಸಾಗಣೆಯನ್ನು ಅಡ್ಡಿಪಡಿಸಬಹುದು. ಹಾಗಾಗಿ ನೀವು ಮಧ್ಯಪ್ರವೇಶಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಚಂದ್ರಬಾಬು ನಾಯ್ಡು ಅವರಿಗೆ ಸಿಎಂ ಪತ್ರದ ಮೂಲಕ ವಿನಂತಿಸಿಕೊಂಡಿದ್ದಾರೆ.

ಇತರ ರಾಜ್ಯಗಳಿಂದ ತೋತಾಪುರಿ ಮಾವಿನ ಹಣ್ಣುಗಳನ್ನು ಜಿಲ್ಲೆಗೆ ಪ್ರವೇಶಿಸುವುದನ್ನು ನಿಷೇಧಿಸಿ ಚಿತ್ತೂರು ಜಿಲ್ಲಾಧಿಕಾರಿಗಳು ಜೂನ್ 07 ರಂದು ಆದೇಶ ಹೊರಡಿಸಿರುವುದಾಗಿ ತಿಳಿದುಬಂದಿದೆ. ಈ ಹಠಾತ್ ಮತ್ತು ಏಕಪಕ್ಷೀಯ ಕ್ರಮವು ಕರ್ನಾಟಕದ ಮಾವು ಬೆಳೆಗಾರರಿಗೆ, ವಿಶೇಷವಾಗಿ ಗಡಿ ಪ್ರದೇಶಗಳಲ್ಲಿ ಗಣನೀಯ ಪ್ರಮಾಣದಲ್ಲಿ ತೋತಾಪುರಿ ಮಾವನ್ನು ಬೆಳೆಯುವವರಿಗೆ ಹೆಚ್ಚಿನ ತೊಂದರೆಯನ್ನುಂಟು ಮಾಡಿದೆ.

ಈ ರೈತರು ಉತ್ಪನ್ನಗಳನ್ನು ಮಾರಾಟ ಮಾಡಲು ಚಿತ್ತೂರು ಮೂಲದ ಸಂಸ್ಕರಣಾ ಘಟಕಗಳೊಂದಿಗೆ ದೀರ್ಘಕಾಲದಿಂದ ಸಂಪರ್ಕ ಹೊಂದಿದ್ದಾರೆ. ಪ್ರಸ್ತುತ ನಿರ್ಬಂಧವು ಈ ಸುಸ್ಥಾಪಿತ ಪೂರೈಕೆ ಸರಪಳಿಯನ್ನು ಅಡ್ಡಿಪಡಿಸಿದೆ ಮತ್ತು ಕೊಯ್ಲಿನ ನಂತರದ ಗಮನಾರ್ಹ ನಷ್ಟವನ್ನುಂಟು ಮಾಡಿದೆ, ಇದು ಸಾವಿರಾರು ರೈತರ ಜೀವನೋಪಾಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

ಪೂರ್ವ ಸಮಾಲೋಚನೆ ಅಥವಾ ಸಮನ್ವಯವಿಲ್ಲದೆ ತೆಗೆದುಕೊಳ್ಳುವ ಈ ರೀತಿಯ ಕ್ರಮಗಳು ಸಹಕಾರಿ ಒಕ್ಕೂಟ ವ್ಯವಸ್ಥೆಯ ಮನೋಭಾವಕ್ಕೆ ವಿರುದ್ಧವಾಗಿವೆ. ಇದು ಉದ್ವಿಗ್ನತೆ ಮತ್ತು ಪ್ರತೀಕಾರದ ಕ್ರಮಗಳಿಗೆ ಕಾರಣವಾಗಬಹುದು ಪಾಲುದಾರರು ಈಗಾಗಲೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ, ಇದು ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತರ-ರಾಜ್ಯ ಸಾಗಣೆಯನ್ನು ಅಡ್ಡಿಪಡಿಸಬಹುದು.ಈ ವಿಷಯದಲ್ಲಿ ನೀವು (ಚಂದ್ರಬಾಬು ನಾಯ್ಡು) ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸುತ್ತೇನೆ ಮತ್ತು ಚಿತ್ತೂರು ಜಿಲ್ಲಾಡಳಿತದ ಆದೇಶವನ್ನು ತಕ್ಷಣವೇ ರದ್ದುಗೊಳಿಸಲು ಜಿಲ್ಲೆಯ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಬೇಕೆಂದು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ರೈತರ ಕಲ್ಯಾಣದ ಹಿತದೃಷ್ಟಿಯಿಂದ ಕೃಷಿ ಉತ್ಪನ್ನಗಳ ಸರಾಗ ಸಾಗಣೆಯನ್ನು ಪುನಃಸ್ಥಾಪಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

51 mins ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

1 hour ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

1 hour ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

2 hours ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

2 hours ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

2 hours ago