ಚೆನ್ನೈ: ಕರ್ನಾಟಕದ ಜೀವನದಿ ಕಾವೇರಿ ಕಾವು ಬಹಳ ಜೋರಾಗಿದ್ದು, ಅಂತರಾಜ್ಯ ಬಿಕ್ಕಟ್ಟು ಬಗೆಹರಿಸುವ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಮಂಗಳವಾರ (ಜು.16) ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಮೊನ್ನೆ ಅಷ್ಟೆ ಸಿಡಬ್ಲ್ಯೂಆರ್ಸಿ ಸೂಚಿಸಿದಂತೆ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಒಪ್ಪದ ಕರ್ನಾಟಕ ಸರ್ಕಾರದ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಮಂಗಳವಾರ ಶಾಸಕರ ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಸೋಮವಾರ ಸಿಎಂ ಎಂಕೆ ಸ್ಟಾಲಿನ್ ತಿಳಿಸಿದ್ದಾರೆ.
ಕಾವೇರಿ ನೀರು ಬಿಡುಗಡೆ ಸಂಬಂಧ ಕರ್ನಾಟಕ ಕೈಗೊಂಡ ಕ್ರಮದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ತಮಿಳುನಾಡು, ರಾಜ್ಯ ಸರ್ಕಾರದ ನೆಡಯನ್ನು ತೀವ್ರವಾಗಿ ವಿರೋಧಿಸಿದೆ.
ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ 75 ಸಾವಿರ ಟಿಎಂಸಿ ನೀರಿದೆ. ಆದರೆ ನಮ್ಮ ಮೆಟ್ಟೂರಿನಲ್ಲಿ ಕೇವಲ 13 ಸಾವಿರ ಟಿಎಂಸಿ ನೀರಿದ್ದು, ಹವಾಮಾನ ಇಲಾಖೆ ಸೂಚನೆ ಪ್ರಕಾರ ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದರೂ ಸಹಾ ಕರ್ನಾಟಕ ನೀರು ಬಿಡಲು ಮುಂದಾಗಿಲ್ಲ. ಸಿಡಬ್ಲ್ಯೂಆರ್ಸಿ ನಿರ್ದೇಶನವನ್ನು ತಿರಸ್ಕರಿಸುವ ಮೂಲಕ ರಾಜ್ಯದ ರೈತರಿಗೆ ದ್ರೋಹ ಬಗೆಯುತ್ತಿದ್ದಾರೆ. ಇದನ್ನು ಎಂದಿಗೂ ಸಹಿಸಲಾಗದು ಎಂದು ಸ್ಟಾಲಿನ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…