ಚೆನ್ನೈ: ಕರ್ನಾಟಕದ ಜೀವನದಿ ಕಾವೇರಿ ಕಾವು ಬಹಳ ಜೋರಾಗಿದ್ದು, ಅಂತರಾಜ್ಯ ಬಿಕ್ಕಟ್ಟು ಬಗೆಹರಿಸುವ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಮಂಗಳವಾರ (ಜು.16) ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಮೊನ್ನೆ ಅಷ್ಟೆ ಸಿಡಬ್ಲ್ಯೂಆರ್ಸಿ ಸೂಚಿಸಿದಂತೆ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಒಪ್ಪದ ಕರ್ನಾಟಕ ಸರ್ಕಾರದ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಮಂಗಳವಾರ ಶಾಸಕರ ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಸೋಮವಾರ ಸಿಎಂ ಎಂಕೆ ಸ್ಟಾಲಿನ್ ತಿಳಿಸಿದ್ದಾರೆ.
ಕಾವೇರಿ ನೀರು ಬಿಡುಗಡೆ ಸಂಬಂಧ ಕರ್ನಾಟಕ ಕೈಗೊಂಡ ಕ್ರಮದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ತಮಿಳುನಾಡು, ರಾಜ್ಯ ಸರ್ಕಾರದ ನೆಡಯನ್ನು ತೀವ್ರವಾಗಿ ವಿರೋಧಿಸಿದೆ.
ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ 75 ಸಾವಿರ ಟಿಎಂಸಿ ನೀರಿದೆ. ಆದರೆ ನಮ್ಮ ಮೆಟ್ಟೂರಿನಲ್ಲಿ ಕೇವಲ 13 ಸಾವಿರ ಟಿಎಂಸಿ ನೀರಿದ್ದು, ಹವಾಮಾನ ಇಲಾಖೆ ಸೂಚನೆ ಪ್ರಕಾರ ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದರೂ ಸಹಾ ಕರ್ನಾಟಕ ನೀರು ಬಿಡಲು ಮುಂದಾಗಿಲ್ಲ. ಸಿಡಬ್ಲ್ಯೂಆರ್ಸಿ ನಿರ್ದೇಶನವನ್ನು ತಿರಸ್ಕರಿಸುವ ಮೂಲಕ ರಾಜ್ಯದ ರೈತರಿಗೆ ದ್ರೋಹ ಬಗೆಯುತ್ತಿದ್ದಾರೆ. ಇದನ್ನು ಎಂದಿಗೂ ಸಹಿಸಲಾಗದು ಎಂದು ಸ್ಟಾಲಿನ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…