ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ನವೀಕರಣಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆಯಲಾಗಿದೆಯೇ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಇಂದು ಸುದ್ದಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ವಕ್ತಾರ ಸುಧಾಂಶು ದ್ವಿವೇದಿ, ಹಣಕಾಸು ಇಲಾಖೆಯ ಅನುಮೋದನೆ ಪಡೆಯದೇ ಸಿಎಂ ನಿವಾಸ ನವೀಕರಿಸಲಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರ ಬಗ್ಗೆ ಸರ್ಕಾರ ದಾಖಲೆ ಬಹಿರಂಗಪಡಿಸಲಿ ಎಂದರು.
ದೆಹಲಿಯಲ್ಲಿ ಎಎಪಿ ಪಕ್ಷವು ನಿಯಮ ಉಲ್ಲಂಘಿಸಿ ಸಿಎಂ ನಿವಾಸ ನವೀಕರಣ ಮಾಡಿತ್ತು. ಈಗ ಕಾಂಗ್ರೆಸ್ ಪಕ್ಷವು ಸಹ ಇದೇ ಹಾದಿಯಲ್ಲಿದೆ ಅನಿಸುತ್ತಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಚಾರ ಹೆಚ್ಚಾಗಿದೆ ಎಂದು ಗುತ್ತಿಗೆದಾರರ ಸಂಘ ಬಹಿರಂಗಪಡಿಸಿದೆ. ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಡೇರಿಸುವಲ್ಲಿ ವಿಫಲವಾಗಿದೆ. ಭ್ರಷ್ಟಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.





