ದೇಶ- ವಿದೇಶ

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ ಮಾಧ್ಯಮವಾಗಿ ಬದಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ರಾತ್ರೋ ರಾತ್ರಿ ಹುಟ್ಟಿದ ಕಾಕ್ರೋಜ್‌ ಜನತಾ ಪಾರ್ಟಿ(ಸಿಜೆಪಿ) ಎನ್ನುವ ರಾಜಕೀಯ ಪಕ್ಷ ಸಾಮಾಜಿಕ ಜಾಲತಾಣದಲ್ಲಿ ಮಾತ್ರವಲ್ಲದೆ ದೇಶದಲ್ಲೂ ಸದ್ದು ಮಾಡಿತ್ತಿದೆ.

ರಾಜಕೀಯ ಸಂವಹನ ತಜ್ಞ ಅಭಿಜೀತ್ ದೀಪ್ಕೆ ಅವರು ಮೇ 16 ರಂದು ಸಾಮಾಜಿಕ ಜಾಲತಾಣದಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹೆಸರಿನಲ್ಲಿ ಅಣಕು ಗೂಗಲ್ ಫಾರ್ಮ್‌ನ್ನು ಆರಂಭಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಕೆಲ ನಿರುದ್ಯೋಗಿ ಕಾರ್ಯಕರ್ತರನ್ನು ‘ಜಿರಳೆ’ ಮತ್ತು ‘ಪರಾವಲಂಬಿ’ ಎಂದು ಹೋಲಿಸಿದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ವಿಡಂಬನೆ ಹುಟ್ಟಿತು ಎಂದು ಹೇಳಲಾಗಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನಂತರ ಈ ಮಾತು ಮೋಸದ ಪದವಿಗಳನ್ನು ಬಳಸಿ ಮೋಸಮಾಡುವವರ ಬಗ್ಗೆ ಮಾತ್ರ ಎಂದು ಹೇಳಿದರು, ಆದರೂ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಹಾನಿ ಆಗಿತ್ತು. ಈ ಕಿಚ್ಚಿನಲ್ಲಿ ಹುಟ್ಟಿದ ಈ ಪಕ್ಷವೇ ಇದೀಗ ಸೋಷಿಯಲ್​ ಮೀಡಿಯಾದಲ್ಲಿ ಹಲ್​ಚಲ್​ ಎಬ್ಬಿಸಿದೆ.

ಕಾಕ್ರೋಚ್​ ಜನತಾ ಪಕ್ಷ ಸ್ಥಾಪನೆಯಾದ ಕೂಡಲೇ ಲಕ್ಷಾಂತರ ಫಾಲೋವರ್ಸ್​!
ಅದಾದ ಕೇವಲ 90 ಗಂಟೆಗಳಲ್ಲಿ ಈ ನೋಂದಣಿ ಲಿಂಕ್‌ ಮೂಲಕ 3,50,000 ಕ್ಕೂ ಹೆಚ್ಚು ಜನರು ಸದಸ್ಯತ್ವಕ್ಕೆ ಹೆಸರು ನೋಂದಾಯಿಸಿದರು, ಇನ್ಸ್ಟಾಗ್ರಾಮ್ ನಲ್ಲಿ ಕೆಲವೇ ಗಂಟೆಗಳಲ್ಲಿ 8 ಮಿಲಿಯನ್‌ಗಿಂತ ಹೆಚ್ಚು ಅನುಯಾಯಿಗಳು ಸೇರ್ಪಡೆಯಾದರು.‌ ಇದೀಗ 12 ಮಿಲಿಯನ್‌ಗೂ ಹೆಚ್ಚು ಅನುಯಾಯಿಗಳು ಇದ್ದಾರೆ.

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು ಮೇ 16 ರಂದು ಮಾತನಾಡುತ್ತ ʼನಿರುದ್ಯೋಗಿ ಯುವ ಜನತೆ ಜಿರಳೆಗಳಿದ್ದಂತೆʼ ಎಂದಿದ್ದರು. ಇದನ್ನೇ ಹಿಡಿದು CJP ‘ಹಾನ್ ಮೈ ಹೂಂ ಜಿರಳೆ’ ಎಂಬ ಪ್ರತಿಭಟನಾ ಹಾಡನ್ನು ಬಿಡುಗಡೆ ಮಾಡಿತು. ಪ್ರಶ್ನೆ ಪತ್ರಿಕೆ ಸೋರಿಕೆ, ಮರುಪರೀಕ್ಷೆ ಶುಲ್ಕದ ಭಾರ, ಕೋಚಿಂಗ್ ಇಂಡಸ್ಟ್ರಿಯ ಒತ್ತಡ ಎಲ್ಲವನ್ನೂ ಈ ಹಾಡು ತೀವ್ರವಾಗಿ ಹೇಳುತ್ತದೆ. ಕ್ಷಣಾರ್ಧದಲ್ಲಿ ಈ ಗೀತೆ ದೆಹಲಿಯಿಂದ ಕೋಟಾದವರೆಗಿನ ವಿದ್ಯಾರ್ಥಿ ಪ್ರತಿಭಟನಗಳ ಹಿಂದಿನ ಘೋಷವಾಗಿಬಿಟ್ಟಿತು.

ಸೋಮಾರಿ ಮತ್ತು ನಿರುದ್ಯೋಗಿಗಳ ಧ್ವನಿ ಎಂದು ಪರಿಚಯಿಸಿಕೊಂಡ CJP
‘ಸೋಮಾರಿ ಮತ್ತು ನಿರುದ್ಯೋಗಿಗಳ ಧ್ವನಿ’ ಎಂದು ತಮಗೆ ತಾವೇ ಪರಿಚಯಿಸಿಕೊಂಡಿರುವ (ಕಾಕ್ರೋಚ್​​ ಜನತಾ ಪಾರ್ಟಿ) CJP, ಕೇವಲ ಹಾಸ್ಯದಲ್ಲೇ ನಿಲ್ಲದೆ 5 ಅಂಶಗಳ ಗಂಭೀರ ನೀತಿ ಪ್ರಣಾಳಿಕೆಯನ್ನು ತಯಾರಿಸಿದೆ. ಅದರ ಪ್ರಮುಖ ಬೇಡಿಕೆ ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ಸುಧಾರಣೆ. NEET, CBSE ಮುಂತಾದ ಪರೀಕ್ಷೆಗಳಲ್ಲಿ ವಂಚನೆ ನಡೆದರೆ ಜವಾಬ್ದಾರ ಅಧಿಕಾರಿಗಳಿಗೆ ಕಠಿಣ, ಜಾಮೀನು ಸಿಗದ ಕ್ರಿಮಿನಲ್ ಶಿಕ್ಷೆ ಇರಬೇಕು ಎಂದು ಅವರು ಆಗ್ರಹಿಸುತ್ತಿದ್ದಾರೆ. ಮರುಮೌಲ್ಯಮಾಪನದ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ವಸೂಲಾಗುವ ಹೆಚ್ಚುವರಿ ಶುಲ್ಕವನ್ನು ಕೂಡ ತಕ್ಷಣ ರದ್ದುಗೊಳಿಸಬೇಕು ಎಂಬುದು ಅವರ ಇನ್ನೊಂದು ಬೇಡಿಕೆ.

ಸಿಜೆಪಿ ಉದ್ದೇಶ ಏನು?
ಇದರ ಹಿಂದಿನ ದೊಡ್ಡ ಅಂಶ, ಸಾಂಸ್ಥಿಕ ಭ್ರಷ್ಟಾಚಾರವನ್ನು ಗುರಿಯಾಗಿಸಿಕೊಂಡಿರುವುದು. ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ನಿವೃತ್ತಿಯ ನಂತರ ರಾಜ್ಯಸಭಾ ಸ್ಥಾನಗಳು ಅಥವಾ ಸರ್ಕಾರಿ ಹುದ್ದೆಗಳನ್ನು ನೀಡುವುದನ್ನು ಶಾಶ್ವತವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ನ್ಯಾಯಾಂಗದ ತಟಸ್ಥತೆ ಉಳಿಸಿಕೊಳ್ಳಲು ಇದು ಅಗತ್ಯ ಎಂಬ ವಾದ ಅವರದ್ದಾಗಿದೆ. ಜೊತೆಗೆ, ಮಾಹಿತಿ ಹಕ್ಕು (RTI) ಕಾಯ್ದೆಯಡಿ ಪಾರದರ್ಶಕತೆಯನ್ನು ಪಾಲಿಸುವುದಾಗಿ, ಅನಾಮಧೇಯ ದೇಣಿಗೆಗಳು ಅಥವಾ ಕಾರ್ಪೊರೇಟ್ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟ ಘೋಷಣೆ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

9 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

10 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

12 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

12 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

15 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

16 hours ago