ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ ನಡುವೆ ಹೆಚ್ಚುತ್ತಿರುವ ಬೆಂಬಲದ ನಡುವೆ ಸಿಜೆಪಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಿರ್ಬಂಧಿಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಎಕ್ಸ್ ಖಾತೆ ನಿರ್ಬಂಧದ ಬೆನ್ನಲ್ಲೇ ಇನ್ಸ್ಟಾಗ್ರಾಂ ಅಕೌಂಟ್ ಕೂಡಾ ಹ್ಯಾಕ್ ಆಗಿದೆ ಎಂದು ಸಿಜೆಪಿ ಸ್ಥಾಪಕ ಅಭಿಜಿತ್ ದಿಪ್ಕೆ ಆರೋಪಿಸಿದ್ದಾರೆ.
ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ ಸಿಜೆಪಿ ಇನ್ಸ್ಟಾ ಖಾತೆ ಹ್ಯಾಕ್ ಆಗಿದೆ ಎಂದು ಆರೋಪ ಮಾಡಿದ್ದಾರೆ. ಕೆಲವು ಸ್ಕ್ರೀನ್ಶಾಟ್ಗಳನ್ನು ಹಂಚಿಕೊಂಡಿರುವ ಅವರು, ಇನ್ಸ್ಟಾಗ್ರಾಮ್ ಖಾತೆಯನ್ನು ಸುರಕ್ಷತೆಗಾಗಿ ಲಾಕ್ ಮಾಡಲಾಗಿದೆ, ಗುರುತು ಪರಿಶೀಲನೆ ಮಾಡಿ, ಪಾಸ್ವರ್ಡ್ ಬದಲಿಸಿದರೆ ಮಾತ್ರ ಮರುಸ್ಥಾಪಿಸಲಾಗುತ್ತದೆ ಎಂಬ ಸಂದೇಶ ಕಾಣುತ್ತದೆ. ಆದರೆ ಮರುಪಡೆಯುವಿಕೆ ಪ್ರಕ್ರಿಯೆ ಪದೇ ಪದೇ ವಿಫಲವಾಗುತ್ತಿದ್ದು, ಅವರು ಸಂಪೂರ್ಣವಾಗಿ ಖಾತೆಯಿಂದ ಹೊರಗುಳಿದಿರುವುದಾಗಿ ಹೇಳಿದ್ದಾರೆ.
ಮೆಟಾ ನೀಡಿರುವ ಖಾತೆ ಮರುಪಡೆಯುವ ವ್ಯವಸ್ಥೆಯ ಮೂಲಕ ಹಲವಾರು ಬಾರಿ ಪ್ರಯತ್ನಿಸಿದರೂ, ತಮ್ಮ ಖಾತೆಯನ್ನು ಮರಳಿ ಪಡೆಯಲು ಸಾಧ್ಯವಾಗಲಿಲ್ಲ ಎಂದು ಅಬಿಜಿತ್ ದಿಪ್ಕೆ ಹೇಳಿಕೊಂಡಿದ್ದಾರೆ. ಸದ್ಯ ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಎಕ್ಸ್ನಲ್ಲಿ ಬ್ಯಾಕಪ್ ಖಾತೆಗೆ ನಿರ್ಬಂಧ
ಸಿಜೆಪಿ ಪಕ್ಷದ ಬ್ಯಾಕಪ್ ಇನ್ಸ್ಟಾಗ್ರಾಮ್ ಖಾತೆಯನ್ನೂ ಕೆಲಕಾಲ ಸಂಪೂರ್ಣವಾಗಿ ತೆಗೆದುಹಾಕಲಾಗಿತ್ತು. ನಂತರ ಗಂಟೆಗಳ ಬಳಿಕ ಅದನ್ನು ಪುನಃಸ್ಥಾಪಿಸಲಾಯಿತು ಎಂದು ದೀಪ್ಕೆ ಆರೋಪಿಸಿದ್ದಾರೆ. ಅವರು ಮಾಡಿದ ಪೋಸ್ಟ್ಗಳಲ್ಲಿ, ಸಾಮಾಜಿಕ ಮಾಧ್ಯಮ ಕಂಪನಿಗಳು ಈ ಚಳವಳಿಗೆ ಸಂಬಂಧಿಸಿದ ಖಾತೆಗಳನ್ನು ಗುರಿಯಾಗಿಸಿಕೊಂಡಿವೆ ಎಂದು ಕಿಡಿಕಾರಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ಮೇಲೆ ಕ್ರ್ಯಾಕ್ಡೌನ್ ನಡೆಯುತ್ತಿದೆ. ನಮ್ಮ ಇನ್ಸ್ಟಾಗ್ರಾಮ್ ಪುಟ, ನನ್ನ ವೈಯಕ್ತಿಕ ಇನ್ಸ್ಟಾಗ್ರಾಮ್, ಟ್ವಿಟರ್ ಖಾತೆ, ಬ್ಯಾಕಪ್ ಖಾತೆ ಎಲ್ಲವನ್ನೂ ಹ್ಯಾಕ್ ಅಥವಾ ತಡೆಹಿಡಿಯಲಾಗಿದೆ ಎಂದು ಹೇಳಿದ್ದಾರೆ.
ಅಬಿಜಿತ್ ದಿಪ್ಕೆ ಫಾರ್ಲೋವರ್ಸ್ಗೆ ಮನವಿ
ತಮ್ಮ ಪಕ್ಷಕ್ಕೆ ಡಿಜಿಟಲ್ ವೇದಿಕೆಗಳಲ್ಲಿ ಪ್ರವೇಶ ನಿರ್ಬಂಧಿಸಲಾಗುತ್ತಿದೆ ಎಂದು ಆರೋಪಿಸಿರುವ ಅಬಿಜಿತ್ ದಿಪ್ಕೆ ದಯವಿಟ್ಟು ಗಮನಿಸಿ, ಸದ್ಯ ನಮಗೆ ಎಲ್ಲ ವೇದಿಕೆಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ. ಹೀಗಾಗಿ, ಇನ್ಮುಂದೆ ಪ್ರಕಟವಾಗುವ ಯಾವುದೇ ಪೋಸ್ಟ್ ಕಾಕ್ರೋಚ್ ಜನತಾ ಪಕ್ಷದ ಅಧಿಕೃತ ಹೇಳಿಕೆ ಎಂದು ಪರಿಗಣಿಸಬೇಡಿ ಎಂದು ಮನವಿ ಮಾಡಿದ್ದಾರೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…